11:50 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು