12:34 AM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು