5:38 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು