5:21 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು