3:09 AM Saturday31 - May 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ… ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ… ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್.… KPCC president | 2028ರ ಚುನಾವಣೆಯಲ್ಲಿ ಹಾಸನದ 7 ಕ್ಷೇತ್ರಗಳಲ್ಲೂ ಗೆಲುವು: ಉಪ…

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು