6:09 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು