10:04 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು