4:22 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು