12:01 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸಿ- ವೋಟರ್ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ; ಕರಾವಳಿ ಜಿಲ್ಲೆಗಳಲ್ಲಿಯೂ ಕೈ ಚೇತರಿಕೆ

29/03/2023, 23:17

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಚೇತರಿಕೆ ಕಾಣಲಿದೆ ಎಂದು ಸಿ-ವೋಟರ್ ಸಮೀಕ್ಷೆ ಅಭಿಪ್ರಾಯಪಟ್ಟಿದೆ.
ಸಿ- ವೋಟರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 115ರಿಂದ 127, ಬಿಜೆಪಿ 68ರಿಂದ 80 ಹಾಗೂ ಜನತಾ ದಳ 23ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಕಳೆದ ಬಾರಿ ಹಿನ್ನಡೆ ಸಾಧಿಸಿದ್ದ ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ
ಬಿಜೆಪಿ 9ರಿಂದ 13 ಹಾಗೂ ಕಾಂಗ್ರೆಸ್ 8ರಿಂದ 12 ಸ್ಥಾನಗಳನ್ನು ಗೆಲ್ಲಲ್ಲಿದೆ ಎಂದು ಸಮೀಕ್ಷೆ ಹೇಳಿದೆ.

ಮುಂಬೈ ಕರ್ನಾಟಕದಲ್ಲಿ ಬಿಜೆಪಿ 25, ಕಾಂಗ್ರೆಸ್ 29 ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲಲ್ಲಿದೆ. ಹೈದರಾಬಾದ್ ಕರ್ನಾಟಕದಲ್ಲಿ ಬಿಜೆಪಿ 12, ಕಾಂಗ್ರೆಸ್ 23 ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲಲ್ಲಿದೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ 28, ಬಿಜೆಪಿ 5 ಹಾಗೂ ಜನತಾ ದಳ 27 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಹಾಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ 19, ಬಿಜೆಪಿ 15 ಹಾಗೂ ಜೆಡಿಎಸ್ 3 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ ಎಂದು ಸಿ- ವೋಟರ್ ಸಮೀಕ್ಷೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು