12:24 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ ಬಂಧನ; ರಾಜ್ಯದ ಬ್ಯಾಂಕ್ ಅಧಿಕಾರಿಗಳೂ ಭಾಗಿ!

30/01/2025, 20:12

ಹೈದರಾಬಾದ್(reporterkarnataka.com): ಬೃಹತ್ ಸೈಬರ್ ವಂಚನೆ ಜಾಲವನ್ನು ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ಸಂಬಂಧಿಸಿದಂತೆ ಬ್ಯಾಂಕ್​ ಅಧಿಕಾರಿಗಳು ಸೇರಿದಂತೆ 52 ಮಂದಿಯನ್ನು ಬಂಧಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ 88.32 ಕೋಟಿ ರೂ. ಮೊತ್ತದ ಸೈಬರ್‌ ವಂಚನೆಯಲ್ಲಿ ಭಾಗಿಯಾಗಿದ್ದ ಪ್ರಕರಣ ಇದಾಗಿದೆ. ಸೈಬರ್ ವಂಚನೆ ಜಾಲಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು, ಹಣ ಅಕ್ರಮ ವರ್ಗಾವಣೆಗೆ ವಂಚಕರಿಗೆ ನೆರವು ನೀಡಿದ್ದ 3 ಮಂದಿ ಬ್ಯಾಂಕ್​ ಅಧಿಕಾರಿಗಳು ಸೇರಿದಂತೆ 52 ಮಂದಿಯ ದಸ್ತಗಿರಿ ಮಾಡಲಾಗಿದೆ.
ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಲ್ಲಿ 33 ಸೈಬರ್ ವಂಚನೆ ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತ ಬ್ಯಾಂಕ್​ ಅಧಿಕಾರಿಗಳಲ್ಲಿ ಕರ್ನಾಟಕದವರೂ ಸೇರಿಸಿದ್ದಾರೆ ಎನ್ನುವುದು ವಿಶೇಷವಾಗಿದೆ.
ಬಂಧಿತರು 88.32 ಕೋಟಿ ರೂ. ವಂಚಿಸಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ 47.90 ಲಕ್ಷ ರೂ. ನಗದು, 40 ಲಕ್ಷ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ, 39 ಎಟಿಎಂ ಕಾರ್ಡ್‌ಗಳು, 17 ಬ್ಯಾಂಕ್​ ಪಾಸ್‌ಬುಕ್‌ಗಳು, 54 ಚೆಕ್‌ಬುಕ್‌ಗಳು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಆರೋಪಿಗಳ ಬ್ಯಾಂಕ್ ಖಾತೆಗಳಲ್ಲಿ 2.87 ಕೋಟಿ ರೂ. ಮೌಲ್ಯದ ನಗದು ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ. ಆನಂದ್ ಮಾಹಿತಿ ನೀಡಿದ್ದಾರೆ.
ಬಂಧಿತ ಬ್ಯಾಂಕ್​ ಅಧಿಕಾರಿಗಳನ್ನು ಬೆಂಗಳೂರು ಆರ್‌ಬಿಎಲ್ ಬ್ಯಾಂಕ್ ಉಪ ವ್ಯವಸ್ಥಾಪಕ
ಶುಭಂ ಕುಮಾರ್ ಝಾ, ಆಕ್ಸಿಸ್ ಬ್ಯಾಂಕ್ ಮಲ್ಲೇಶ್ವರಂ ಶಾಖೆಯ ಹರೂನ್ ರಶೀದ್ ಮತ್ತು ಆರ್. ಮೋಹನ್, ಕೋಟಕ್ ಮಹೀಂದ್ರ ಬ್ಯಾಂಕ್ ಹೈದರಾಬಾದ್ ಜೆಎನ್‌ಟಿಯು ಶಾಖೆಯ ಮಾರಾಟ ವ್ಯವಸ್ಥಾಪಕ ಕೆ. ಶ್ರೀನಿವಾಸ ರಾವ್ ಎಂದು ಗುರುತಿಸಲಾಗಿದೆ.
ಶುಭಂ ಕುಮಾರ್ ಝಾ ಮತ್ತು ಹರೂನ್ ರಶೀದ್ ಹಾಗೂ ಆರ್. ಮೋಹನ್ ಸೇರಿ ಯಾವುದೇ ದಾಖಲೆಗಳಿಲ್ಲದೇ ನೂರಾರು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಸೈಬರ್ ಅಪರಾಧಿಗಳಿಗೆ ಸಹಾಯ ಮಾಡುತ್ತಿದ್ದರು. ಅವರು ಪ್ರತಿ ಖಾತೆಗೆ 50,000 ರೂ.ಗಳಿಂದ 80,000 ರೂ.ಗಳವರೆಗೆ ಕಮಿಷನ್ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಬಂಧಿತ ಬ್ಯಾಂಕ್​ ಅಧಿಕಾರಿಗಳು ಕಮಿಷನ್‌ ಆಸೆಗಾಗಿ ನಕಲಿ ಅಥವಾ ಗುಪ್ತ​​​​ (Mule) ಹೆಸರಿನಲ್ಲಿ ಬ್ಯಾಂಕ್‌ ಖಾತೆ ತೆರೆದು ವಂಚಕರಿಗೆ ಹಣ ಅಕ್ರಮವಾಗಿ ವರ್ಗಾಯಿಸಲು ಸಹಾಯ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಹೈದರಾಬಾದ್‌ನಾದ್ಯಂತ ವಿಶೇಷ ಪೊಲೀಸ್ ಕಾರ್ಯಾಚರಣೆ ನಡೆಸಿ ವಂಚಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು