3:39 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ ಬಂಧನ; ರಾಜ್ಯದ ಬ್ಯಾಂಕ್ ಅಧಿಕಾರಿಗಳೂ ಭಾಗಿ!

30/01/2025, 20:12

ಹೈದರಾಬಾದ್(reporterkarnataka.com): ಬೃಹತ್ ಸೈಬರ್ ವಂಚನೆ ಜಾಲವನ್ನು ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ಸಂಬಂಧಿಸಿದಂತೆ ಬ್ಯಾಂಕ್​ ಅಧಿಕಾರಿಗಳು ಸೇರಿದಂತೆ 52 ಮಂದಿಯನ್ನು ಬಂಧಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ 88.32 ಕೋಟಿ ರೂ. ಮೊತ್ತದ ಸೈಬರ್‌ ವಂಚನೆಯಲ್ಲಿ ಭಾಗಿಯಾಗಿದ್ದ ಪ್ರಕರಣ ಇದಾಗಿದೆ. ಸೈಬರ್ ವಂಚನೆ ಜಾಲಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು, ಹಣ ಅಕ್ರಮ ವರ್ಗಾವಣೆಗೆ ವಂಚಕರಿಗೆ ನೆರವು ನೀಡಿದ್ದ 3 ಮಂದಿ ಬ್ಯಾಂಕ್​ ಅಧಿಕಾರಿಗಳು ಸೇರಿದಂತೆ 52 ಮಂದಿಯ ದಸ್ತಗಿರಿ ಮಾಡಲಾಗಿದೆ.
ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಲ್ಲಿ 33 ಸೈಬರ್ ವಂಚನೆ ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತ ಬ್ಯಾಂಕ್​ ಅಧಿಕಾರಿಗಳಲ್ಲಿ ಕರ್ನಾಟಕದವರೂ ಸೇರಿಸಿದ್ದಾರೆ ಎನ್ನುವುದು ವಿಶೇಷವಾಗಿದೆ.
ಬಂಧಿತರು 88.32 ಕೋಟಿ ರೂ. ವಂಚಿಸಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ 47.90 ಲಕ್ಷ ರೂ. ನಗದು, 40 ಲಕ್ಷ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ, 39 ಎಟಿಎಂ ಕಾರ್ಡ್‌ಗಳು, 17 ಬ್ಯಾಂಕ್​ ಪಾಸ್‌ಬುಕ್‌ಗಳು, 54 ಚೆಕ್‌ಬುಕ್‌ಗಳು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಆರೋಪಿಗಳ ಬ್ಯಾಂಕ್ ಖಾತೆಗಳಲ್ಲಿ 2.87 ಕೋಟಿ ರೂ. ಮೌಲ್ಯದ ನಗದು ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ. ಆನಂದ್ ಮಾಹಿತಿ ನೀಡಿದ್ದಾರೆ.
ಬಂಧಿತ ಬ್ಯಾಂಕ್​ ಅಧಿಕಾರಿಗಳನ್ನು ಬೆಂಗಳೂರು ಆರ್‌ಬಿಎಲ್ ಬ್ಯಾಂಕ್ ಉಪ ವ್ಯವಸ್ಥಾಪಕ
ಶುಭಂ ಕುಮಾರ್ ಝಾ, ಆಕ್ಸಿಸ್ ಬ್ಯಾಂಕ್ ಮಲ್ಲೇಶ್ವರಂ ಶಾಖೆಯ ಹರೂನ್ ರಶೀದ್ ಮತ್ತು ಆರ್. ಮೋಹನ್, ಕೋಟಕ್ ಮಹೀಂದ್ರ ಬ್ಯಾಂಕ್ ಹೈದರಾಬಾದ್ ಜೆಎನ್‌ಟಿಯು ಶಾಖೆಯ ಮಾರಾಟ ವ್ಯವಸ್ಥಾಪಕ ಕೆ. ಶ್ರೀನಿವಾಸ ರಾವ್ ಎಂದು ಗುರುತಿಸಲಾಗಿದೆ.
ಶುಭಂ ಕುಮಾರ್ ಝಾ ಮತ್ತು ಹರೂನ್ ರಶೀದ್ ಹಾಗೂ ಆರ್. ಮೋಹನ್ ಸೇರಿ ಯಾವುದೇ ದಾಖಲೆಗಳಿಲ್ಲದೇ ನೂರಾರು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಸೈಬರ್ ಅಪರಾಧಿಗಳಿಗೆ ಸಹಾಯ ಮಾಡುತ್ತಿದ್ದರು. ಅವರು ಪ್ರತಿ ಖಾತೆಗೆ 50,000 ರೂ.ಗಳಿಂದ 80,000 ರೂ.ಗಳವರೆಗೆ ಕಮಿಷನ್ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಬಂಧಿತ ಬ್ಯಾಂಕ್​ ಅಧಿಕಾರಿಗಳು ಕಮಿಷನ್‌ ಆಸೆಗಾಗಿ ನಕಲಿ ಅಥವಾ ಗುಪ್ತ​​​​ (Mule) ಹೆಸರಿನಲ್ಲಿ ಬ್ಯಾಂಕ್‌ ಖಾತೆ ತೆರೆದು ವಂಚಕರಿಗೆ ಹಣ ಅಕ್ರಮವಾಗಿ ವರ್ಗಾಯಿಸಲು ಸಹಾಯ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಹೈದರಾಬಾದ್‌ನಾದ್ಯಂತ ವಿಶೇಷ ಪೊಲೀಸ್ ಕಾರ್ಯಾಚರಣೆ ನಡೆಸಿ ವಂಚಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು