8:01 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು