6:37 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು