8:57 PM Thursday10 - April 2025
ಬ್ರೇಕಿಂಗ್ ನ್ಯೂಸ್
ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್…

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು