4:27 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು