11:22 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು