9:49 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು ಪಾರು

21/02/2026, 19:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿದ್ದಾಪುರ ವ್ಯಾಪ್ತಿಯಲ್ಲಿ ವಾಹನಗಳ ಮೇಲೆ ವನ್ಯಜೀವಿಗಳ ದಾಳಿ ಮುಂದುವರೆದಿದೆ. ನೆನ್ನೆ ಯಷ್ಟೇ ಕಾಡು ಕೋಣ ಮೇಲೆ ಟಾಟಾ ಏಸ್ ದಿಕ್ಕಿಯಾದ ಬೆನ್ನಲ್ಲೇ ಮಾಲ್ದಾರೆ ಯಲ್ಲಿ ಕಾಡಾನೆಯೊಂದು ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕಡೆದುಕೊಂಡು ಹೋಗುತ್ತಿದ್ದ ಸಂದರ್ಭ ಜೀಪ್ ಮೇಲೆ ದಾಳಿ ನಡೆಸಿದೆ.

ಮಾಲ್ದಾರೆಯ ತಟ್ಟಳ್ಳಿ ಈ ದಾಳಿ ಸಂಭವಿಸಿದ್ದು ಕಾರ್ಮಿಕ ಮಹಿಳೆ ಸುನೀತಾ ಎಂಬುವರು ಗಂಭೀರ ಗಾಯಗೊಂಡು ಸಿದ್ದಾಪುರ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮಡಿಕೇರಿ ಜಿಲ್ಲಾಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ಆನೆ ಹಿಂದಿನ ದಿನ ಕಾರಿನ ಮೇಲೆ ದಾಳಿ ಮಾಡಿದ ಪರಿಣಾಮ ಆನೆಯನ್ನು ಕಾಡಿಗೆ ಅಟ್ಟುವ ಕೆಲಸವನ್ನು ಅರಣ್ಯ ಇಲಾಖೆ ರಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿಗಳ ಮೇಲೂ ದಾಳಿಗೆ ಮುಂದಾಗಿತ್ತು ಎಂದು ತಿಳಿದು ಬಂದಿದೆ.
ಒಂಟಿಯಾಗಿ ಕಾಡಾನೆ ಕಾಫಿ ತೋಟದಲ್ಲಿ ಅಡ್ಡಾಡುತ್ತಿದ್ದು ಕಾರ್ಮಿಕರು ಮತ್ತು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು