4:07 PM Monday16 - February 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

16/02/2026, 14:48

ರಶ್ಮೀ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಜೀರೋ ಸಾಧನೆ ಜೀರೋ ಅಭಿವೃದ್ಧಿಯ ಯಾವುದಾದರೂ ಸರ್ಕಾರ ಕರ್ನಾಟಕದಲ್ಲಿ ಬಂದಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಕೆಲವರು ಫಾರಿನ್ ಗೆ ಹೋಗ್ತಾ ಇದ್ದಾರೆ. ಕೆಲವರು ದೆಹಲಿಗೆ ಹೋಗ್ತಾ ಇದ್ದಾರೆ. ಒಟ್ಟಾರೆ ಕೆಲಸ ಮಾಡುವುದು ಬಿಟ್ಟು ಬೇರೆಲ್ಲ ಮಾಡುತ್ತಿದ್ದಾರೆ. ಇವರ ರಾಜಕೀಯ ಜಂಜಾಟದಲ್ಲಿ ಜನಗಳು ಬಡವಾಗುತ್ತಿದ್ದಾರೆ.140 ಸೀಟ್ ಕೊಟ್ಟಾಗ ಗೌರವದಿಂದ ಅಭಿವೃದ್ಧಿ ಮಾಡಿ ಕರ್ನಾಟಕವನ್ನು ಮುನ್ನಡೆಸಬೇಕಿತ್ತು. ಆದರೆ ಈಗ ಯಾವುದೇ ಅಭಿವೃದ್ಧಿ ಇಲ್ಲ ಎಂದರು.
ಅವರ ಸ್ವಾರ್ಥ, ಸ್ವಂತ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿ ಏಳುತ್ತಿದ್ದಾರೆ. ಅವರಿಗೆ ಕೊನೆಯ ಅಧಿಕಾರ ಎಂದು ಅನಿಸಿಬಿಟ್ಟಿದೆ. ಎಷ್ಟು ದೋಚಲು ಸಾಧ್ಯವೋ ಅಷ್ಟು ದೋಚುತ್ತಿದ್ದಾರೆ. ಕರ್ನಾಟಕ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಯುತ್ತಿದೆ. ಸರ್ಕಾರ ನಡೆದಷ್ಟು ದಿವಸ ಕರ್ನಾಟಕ ಜನರಿಗೆ ಬಹಳಷ್ಟು ನಷ್ಟವಾಗುತ್ತದೆ ಎಂದರು .

ಇತ್ತೀಚಿನ ಸುದ್ದಿ

ಜಾಹೀರಾತು