4:26 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಕೈಯಲ್ಲಿ ಕತ್ತಿ ಇತ್ತು: ಕೆಪಿಪಿಸಿ ವಕ್ತಾರ ಲಕ್ಷ್ಮಣ್ ಸ್ಫೋಟಕ ಹೇಳಿಕೆ

21/08/2022, 01:15

ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಬಳಿ ಕತ್ತಿ ಇತ್ತು ಎಂದು ಕೆಪಿಸಿಸಿ ವಕ್ತಾರ, ಕೊಡಗು ಉಸ್ತುವಾರಿ ಲಕ್ಷ್ಮಣ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪೊಲೀಸ್ ವೈಫಲ್ಯವನ್ನು ಖಂಡಿಸಿ ಮಡಿಕೇರಿ ಎಸ್.ಪಿ ಕಚೇರಿ ಮುಂದೆ ಶುಕ್ರವಾರ ಕೊಡಗು ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಲಕ್ಷ್ಮಣ್, ಸಿದ್ದರಾಮಯ್ಯ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಕೈಯಲ್ಲಿ ಕತ್ತಿ ಇತ್ತು, ನಾನು ಕಾರಿನೊಳಗೆ ಇದ್ದೆ. ಇಬ್ಬರು ಕತ್ತಿ ತಕೊಂಡು ಹೊಡೆಯಲಿಕೆ ಬಂದರು, ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಚುಚ್ಚಿ ಬಿಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ ಅವರು, ಇದರ ಬಗ್ಗೆ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಗೂಂಡಾ ಕಾಯ್ದೆಯಡಿ ಬಂಧಿಸಬೇಕೆಂದು ಒತ್ತಾಯಿಸಿದರು.

26 ರಂದು ಮಡಿಕೇರಿ ಎಸ್.ಪಿ ಕಚೇರಿ ಮುತ್ತಿಗೆ ಹೋರಾಟ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದ್ದು, ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ 70 ಕ್ಕೂ ಹೆಚ್ಚು ಶಾಸಕರು ಹೋರಾಟದಲ್ಲಿ ಭಾಗವಹಿಸಲಿದೆ ಎಂದರು.  

ಈ ಘಟನೆಯಿಂದಾಗಿ ಬಿಜೆಪಿಗರು ರಾಷ್ಟ್ರಮಟ್ಟದಲ್ಲಿ ಕೊಡಗಿನ ಹೆಸರನ್ನು ಕೆಡಿಸಿದ್ದಾರೆಂದು ದೂರಿದರು.

ಇತ್ತೀಚಿನ ಸುದ್ದಿ

ಜಾಹೀರಾತು