1:48 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಕೈಯಲ್ಲಿ ಕತ್ತಿ ಇತ್ತು: ಕೆಪಿಪಿಸಿ ವಕ್ತಾರ ಲಕ್ಷ್ಮಣ್ ಸ್ಫೋಟಕ ಹೇಳಿಕೆ

21/08/2022, 01:15

ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಬಳಿ ಕತ್ತಿ ಇತ್ತು ಎಂದು ಕೆಪಿಸಿಸಿ ವಕ್ತಾರ, ಕೊಡಗು ಉಸ್ತುವಾರಿ ಲಕ್ಷ್ಮಣ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪೊಲೀಸ್ ವೈಫಲ್ಯವನ್ನು ಖಂಡಿಸಿ ಮಡಿಕೇರಿ ಎಸ್.ಪಿ ಕಚೇರಿ ಮುಂದೆ ಶುಕ್ರವಾರ ಕೊಡಗು ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಲಕ್ಷ್ಮಣ್, ಸಿದ್ದರಾಮಯ್ಯ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಕೈಯಲ್ಲಿ ಕತ್ತಿ ಇತ್ತು, ನಾನು ಕಾರಿನೊಳಗೆ ಇದ್ದೆ. ಇಬ್ಬರು ಕತ್ತಿ ತಕೊಂಡು ಹೊಡೆಯಲಿಕೆ ಬಂದರು, ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಚುಚ್ಚಿ ಬಿಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ ಅವರು, ಇದರ ಬಗ್ಗೆ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಗೂಂಡಾ ಕಾಯ್ದೆಯಡಿ ಬಂಧಿಸಬೇಕೆಂದು ಒತ್ತಾಯಿಸಿದರು.

26 ರಂದು ಮಡಿಕೇರಿ ಎಸ್.ಪಿ ಕಚೇರಿ ಮುತ್ತಿಗೆ ಹೋರಾಟ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದ್ದು, ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ 70 ಕ್ಕೂ ಹೆಚ್ಚು ಶಾಸಕರು ಹೋರಾಟದಲ್ಲಿ ಭಾಗವಹಿಸಲಿದೆ ಎಂದರು.  

ಈ ಘಟನೆಯಿಂದಾಗಿ ಬಿಜೆಪಿಗರು ರಾಷ್ಟ್ರಮಟ್ಟದಲ್ಲಿ ಕೊಡಗಿನ ಹೆಸರನ್ನು ಕೆಡಿಸಿದ್ದಾರೆಂದು ದೂರಿದರು.

ಇತ್ತೀಚಿನ ಸುದ್ದಿ

ಜಾಹೀರಾತು