3:23 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಜನಸಮೂಹದ ನಾಯಕ; ಎಲ್ಲಿ ನಿಲ್ಲಬೇಕೆಂಬುದನ್ನು

10/11/2022, 20:53

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಕ್ಷೇತ್ರದಲ್ಲಿ ಗುಂಪುಗಾರಿಕೆ ಇಲ್ಲ ಎಂದು ಹೇಳಲಾರೆ , ಸಿದ್ದರಾಮಯ್ಯ ಜನಸಮೂಹದ ನಾಯಕ , ಜನರ ನಾಡಿಮಿಡಿತ ಅರಿತವರು ಅವರು ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್ ಹೇಳಿದರು.

ತಾಲ್ಲೂಕಿನ ವೇಮಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಚುನಾವಣಾ ಪ್ರಚಾರ ಕೆಪಿಸಿಸಿಯಿಂದ ಅಧಿಕೃತವಾಗಿ ಘೋಷಣೆಯಾಗಿಲ್ಲ , ನ .೧೩ ರಂದು ಸಿದ್ದರಾಮಯ್ಯ ಸೀತಿ ಗ್ರಾಮಕ್ಕೆ ಭೇಟಿ ನೀಡಲಿದ್ದು , ಅವರು ದಿವಂಗತ ಬೈರೇಗೌಡರ ಜತೆಯಲ್ಲಿ ರಾಜಕಾರಣ ಮಾಡಿದವರಾಗಿದ್ದು , ಅವರ ಸಮಾದಿಗೂ ಪೂಜೆ ಸಲ್ಲಿಸಲಿದ್ದಾರೆ . ನಂತರ ಕೋಲಾರಮ್ಮ ದೇವಾಲಯಕ್ಕೂ ಭೇಟಿ ನೀಡಲಿದ್ದಾರೆ ಎಂದರು . ಕೋಲಾರ ಕ್ಷೇತ್ರದಲ್ಲಿ ನಾನೂ ಆಕಾಂಕ್ಷಿಯೇ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೨೦೧೪ , ೨೦೧೮ ರಲ್ಲಿ ನಾನೂ ಸ್ಪರ್ಧಿಸಲು ಬಯಸಿದ್ದೆ . ನಾನೂ ಟಿಕೆಟ್ ಆಕಾಂಕ್ಷಿಯೇ ಎಂದ ಸುದರ್ಶನ್ , ಸಿದ್ದರಾಮಯ್ಯ ಬರುವುದಾದರೆ ಸ್ವಾಗತ ಆದರೆ ಅದಕ್ಕೆ ಅವರೂ ಅರ್ಜಿ ಹಾಕಬೇಕು , ಚುನಾವಣಾ ಸಮಿತಿ ಅದನ್ನು ಕೆಪಿಸಿಸಿಗೆ ನೀಡಿ , ಅಲ್ಲಿಂದ ಎಐಸಿಸಿ ಹಂತದಲ್ಲಿ ಸ್ಟೀನಿಂಗ್ ಕಮಿಟಿ ಇದ್ದು , ನಂತರ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ ಎಂದರು . ಕೋಲಾರದಿಂದ ನಾನು ಸ್ಪರ್ಧಿಸಲು ಬಯಸಿರುವೆ , ಇಲ್ಲಿನ ಜನರು , ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯವೂ ಇದೆ , ಸಿದ್ದರಾಮಯ್ಯ ಬರಲಿ ಇಲ್ಲವಾದಲ್ಲಿ ನನಗೂ ಅವಕಾಶ ನೀಡಲು ಪಕ್ಷವನ್ನು ಕೋರುವೆ ಎಂದರು . ರಾಜ್ಯ ದೇಶದಲ್ಲಿ ಆಳುತ್ತಿರುವ ಬಿಜೆಪಿ ವೈಫಲ್ಯಗಳ ವಿರುದ್ಧ ಜನಾಭಿಪ್ರಾಯವಿದೆ , ಜನ ಬದಲಾವಣೆ ಬಯಸಿದ್ದಾರೆ , ಸಿದ್ದರಾಮಯ್ಯ ಅಗಾಧ ಆಡಳಿತದ ಅನುಭವ ಹೊಂದಿದ್ದು , ಹಲವಾರು ಚುನಾವಣೆ ನೋಡಿದ್ದಾರೆ ಎಂದರು . ಜಾರಕಿಹೋಳಿ ಮಾತು ಮುಗಿದ ಅಧ್ಯಾಯ ಸಾರ್ವಜನಿಕ ಜೀವನದಲ್ಲಿ ಧಾರ್ಮಿಕ ವಿಷಯ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು , ಆದರೆ ಅವರು ಇದೀಗ ವಿಷಾದ ವ್ಯಕ್ತಪಡಿಸಿರುವುದರಿಂದ ಅದು ಮುಗಿದ ಅಧ್ಯಾಯ ಎ ೦ ದ ಸುದರ್ಶನ್ , ಅದನ್ನು ಮತ್ತೆ ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು .

ಕೋಲಾರದ ಕಾಂಗ್ರೆಸ್ಸಿನಲ್ಲೂ ಕಣಕ್ಕಿಳಿಯಲು ಸಮರ್ಥರಿದ್ದಾರೆ ಎಂದ ಅವರು , ಸಿದ್ದರಾಮಯ್ಯ ಅವರಿಗೆ ಕ್ಷೇತ್ರವಿಲ್ಲ ಎಂಬ ಟೀಕೆಗಳನ್ನು ತಳ್ಳಿ ಹಾಕಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅವರನ್ನು ಸ್ಪರ್ಧಿಸಲು ಆಹ್ವಾನಿಸುತ್ತಿದ್ದಾರೆ ಅದು ಅವರ ಜನಪ್ರಿಯತೆಗೆ ಸಾಕ್ಷಿಯಲ್ಲವೇ ಎಂದು ಪ್ರಶ್ನಿಸಿದರು . ಸದಸ್ಯತ್ವ ಅಭಿಯಾನಕ್ಕಾಗಿ ನಾನು ಜಿಲ್ಲಾಧ್ಯಕ್ಷನಾಗಿದ್ದೆ . ಇದೀಗ ಬೇರೆಯವರನ್ನು ಪಕ್ಷ ಅತಿ ಶೀಘ್ರ ನೇಮಿಸುತ್ತದೆ ಎಂದು ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು