3:39 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ: ಮಾಜಿ ಸಚಿವೆ ಮೋಟಮ್ಮ

15/06/2022, 19:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕಿ, ಮಾಜಿ ಸಚಿವೆ ಮೋಟಮ್ಮ ಹೇಳಿದರು.

ಬುಧವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗ ನನ್ನನ್ನ ಕಡೆಗಣಿಸಲಾಯಿತು. ಮಹಿಳಾ ಕೋಟದಲ್ಲಿ ನನಗೆ ಸಚಿವ ಸ್ಥಾನ ನೀಡಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮಂಥವರು ಚುನಾವಣೆ ಎದುರಿಸೋಕೆ ಕಷ್ಟ.ಕಳೆದ ಎಲೆಕ್ಷನ್ ನಲ್ಲಿ ಸಾಕಷ್ಟು ನೊಂದಿದ್ದೇನೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ನನ್ನ ಮಗಳಿಗೆ ಟಿಕೆಟ್ ಕೇಳಿದ್ದೇನೆ ಎಂದರು.

ಚುನಾವಣೆ ವೆಚ್ಚ ಭರಿಸಲು ಮನೆ ಭೋಗ್ಯಕ್ಕೆ ಹಾಕಿದ್ದೇನೆ. 8 ಚುನಾವಣೆ ಎದುರಿಸಿದ್ದೇನೆ, 2018ರ ಚುನಾವಣೆ ಬಲು ದುಸ್ತರ ಎಂದು ನುಡಿದರು.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಗೆ ನನ್ನ ವಿರೋಧವಿದೆ. ಬಿಜೆಪಿಯವರ ಕೈ-ಬಾಯಿ ಸರಿ ಇಲ್ಲ. ಅಲ್ಲಿ ಮೇವು ಸಿಗುತ್ತೆ ಅಂತ ಕೆಲವರು ಬಿಜೆಪಿ ಸೇರಿದರು. ಕುಮಾರಸ್ವಾಮಿಗೆ ಟಿಕೆಟ್ ಕೊಡುವುದು ಬದಲು ಕಾಂಗ್ರೆಸ್ ನ ಬೂತ್ ಕಾರ್ಯಕರ್ತನಿಗೆ ನೀಡಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು