11:05 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ನಾವು ಅವರನ್ನು ಸೋಲಿಸುತ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

14/02/2023, 18:20

ಕೊಪ್ಪಳ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲೇ ಸ್ಪರ್ಧಿಸಲಿ, ಅವರನ್ನು ಸೋಲಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಕೊಪ್ಪಳದ ಹಲಗೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧೆ ಮಾಡಲಿ, ಇಲ್ಲವೇ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಅವರನ್ನು ಸೋಲಿಸುತ್ತೇವೆ. ಅವರ ವಿರುದ್ದ ಯಾರನ್ನ ನಿಲ್ಲಿಸಬೇಕು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ ಎಂದರು.

ಬಂಡೆ ಉರುಳಿ ಬೀಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಕಾಂಗ್ರೆಸ್‌ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂಬ ಆತ್ಮವಿಶ್ವಾಸವನ್ನು
ನಳಿನ್‌ ಕುಮಾರ್‌ ಕಟೀಲ್‌ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ನಾಯಕ ಮುನಿಯಪ್ಪ ಮುನಿಸಿಕೊಂಡಿದ್ದಾರೆ. ಅಲ್ಲಿ ಅವರು ನಿಂತರೆ ನಾವಲ್ಲ, ಕಾಂಗ್ರೆಸ್ ನವರೇ ಸೋಲಿಸಿ ಕಳುಹಿಸುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು