1:15 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯರದ್ದು ಸರ್ವರ ಅಭಿವೃದ್ಧಿಯ ಗ್ಯಾರಂಟಿ ಬಜೆಟ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಅಭಿಮತ

07/07/2023, 21:03

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಸರ್ವರ ಅಭಿವೃದ್ಧಿಯನ್ನು ಒಳಗೊಂಡಿದೆ. ಸರ್ವರಿಗೂ ಸಮಪಾಲು ಸಮಬಾಳು, ಬಡವರ ಕಲ್ಯಾಣ, ಸಾಮಾಜಿಕ ನ್ಯಾಯ, ಸಾಮಾಜಿಕ ಸಮಾನತೆಯ ಆಯವ್ಯಯ ಮಂಡಿಸಿದ್ದು, ಸರ್ಕಾರ ಬಡವರ ಪರ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದ್ದಾರೆ.
5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಅನುದಾನ, ಇಂದಿರಾ ಕ್ಯಾಂಟಿನ್‌ಗೆ 100 ಕೋಟಿ ರೂ. ಅನುದಾನ, ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ಸೌಲಭ್ಯವನ್ನು 3ರಿಂದ 5 ಲಕ್ಷ ರೂ.ಗೆ ಏರಿಕೆ, ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ರೂ. ಅನುದಾನ, ಜಾನುವಾರುಗಳು ಆಕಸ್ಮಿಕವಾಗಿ ಸತ್ತರೆ ಅನುಗ್ರಹ ಯೋಜನೆ ಮರು ಜಾರಿಗೊಳಿಸುವ ಮೂಲಕ 10 ಸಾವಿರ ರೂ. ಪರಿಹಾರ, ರಸ್ತೆ, ಕಾಲುವೆ ದುರಸ್ತಿ ಸೇರಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.
ರೈತರ ಆದಾಯ ಹೆಚ್ಚಿಸಲು ಯೋಜನೆ, ಮೀನುಗಾರ ಮಹಿಳೆಯರ ಸಾಲ ಮಿತಿ 3 ಲಕ್ಷ ರೂ. ಹೆಚ್ಚಳ, ಮೀನುಗಾರಿಕಾ ಬೋಟ್ ಡೀಸೆಲ್ ಮಿತಿ ಹೆಚ್ಚಳ, ದೇಶದಲ್ಲೇ ಮೊದಲ ಅಂಗಾಂಗ ಜೋಡನೆ ಆಸ್ಪತ್ರೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 550 ಕೋಟಿ ರೂ. ಮೀಸಲು, ಬಿಜೆಪಿ ಸರ್ಕಾರ ಅವಧಿಯಲ್ಲಿ ಪರಿಷ್ಕೃತ ಪಠ್ಯ ಪರಿಷ್ಕರಣೆ, ಶಾಲಾ ಕಾಲೇಜುಗಳಲ್ಲಿ ಹೊಸ ಶೌಚಗೃಹ ನಿರ್ಮಾಣಕ್ಕೆ 200 ಕೋಟಿ ರೂ., ಮಕ್ಕಳ ಪೌಷ್ಟಿಕಾಂಶ ಹೆಚ್ಚಳಕ್ಕೆ 1-10ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ 219 ಡಯಾಲಿಸಿಸ್ ಸೆಂಟರ್ 92 ಕೋಟಿ, ಆರೋಗ್ಯ ಇಲಾಖೆಗೆ 14 ಸಾವಿರ ಕೋಟಿ ರೂ, ಕಲಿಕಾ ಬಲವರ್ಧನೆಗೆ ಯೋಜನೆ, ಪರಿಸರ ಸಂರಕ್ಷಣೆಗೆ ಆದ್ಯತೆ, ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ, ಎಂಆರ್‌ಐ ಸ್ಕ್ಯಾನಿಂಗ್ ವ್ಯವಸ್ಥೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅರಿವು ಯೋಜನೆ ಮರು ಜಾರಿ ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಘೋಷಿಸುವ ಮೂಲಕ ಎಲ್ಲರ ಅಭಿವೃದ್ಧಿಯೂ ಈ ಯೋಜನೆಗಳಿಂದ ಗ್ಯಾರಂಟಿ ಎಂಬುದರಲ್ಲಿ ಎರಡು ಮಾತಿಲ್ಲ, ಮಹಿಳೆಯರು, ಹಿಂದುಳಿದ ವರ್ಗ, ದೀನ, ದಲಿತರು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳ ಸ್ಥಾಪನೆಗೆ ಅವಕಾಶ ನೀಡಿರುವುದು ಶ್ಲಾಘನೀಯ ಎಂದಿದ್ದಾರೆ.
ರಾಜ್ಯದ ಎಲ್ಲ ತಾಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ, ಯುವಕರು ಹೃದಯಾಘಾತದಿಂದ ಸಾವನ್ನಪ್ಪುವುದನ್ನು ಪತ್ತೆಹಚ್ಚಲು ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಈ ಹಿಂದೆ ಒತ್ತಾಯಿಸುತ್ತಲ್ಲೇ ಬಂದಿದ್ದೆವು. ಅದಕ್ಕೆ ಪೂರಕ ಎಂಬಂತೆ ಪುನಿತ್‌ರಾಜ್‌ಕುಮಾರ್ ಸ್ಮರಣಾರ್ಥ ಆಸ್ಪತ್ರೆಗಳಲ್ಲಿ ಎಇಡಿ ಯಂತ್ರದ ಸ್ಥಾಪನೆ ಮಾಡಿ ಹೃದಯಾಘಾತ ಪತ್ತೆ ಹಚ್ಚಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಸಮಾಜ ಕಲ್ಯಾಣ ಹಾಗು ಪರಿಶಿಷ್ಟ ವರ್ಗಗಳ ಇಲಾಖೆಯ ಅಭಿವೃದ್ಧಿ ನಿಗಮಗಳ ಕಲ್ಯಾಣಕ್ಕಾಗಿ ಅನುದಾನ, ಗೋಶಾಲೆಗಳ ಗೋವುಗಳ ದತ್ತು ಸ್ವೀಕಾರಕ್ಕಾಗಿ ಪುಣ್ಯಕೋಟಿ ದತ್ತು ಯೋಜನೆ ಈಗೆ ಹತ್ತು ಹಲವು ಕಲ್ಯಾಣ ಯೋಜನೆಗಳನ್ನು ಮಂಡಿಸುವ ಮೂಲಕ ಸರ್ವರ ಹಿತ ಕಾಯುವ ಆಯವ್ಯಯ ಮಂಡಿಸಿದ್ದಾರೆ. ಎಲ್ಲ ವರ್ಗದ ಜನರಿಗೂ ಅನುದಾನ ಮೀಸಲಿಡುವ ಮೂಲಕ ಸರ್ವರ ಹಿತ ಕಾಪಾಡುವ ಪ್ರಯತ್ನ ಕಾಣಬಹುದು.
ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎನ್ನುವ ಸಮ ಸಮಾಜದ ಆಶಯ ಇರುವ ಸಾಮಾಜಿಕ ನ್ಯಾಯದ ಈ ಬಜೆಟ್ ದೇಶಾದ್ಯಂತ ಹಣ ದುಬ್ಬರ ಮತ್ತು ಬೆಲೆ ಏರಿಕೆಯ ಸಂಧರ್ಭದಲ್ಲಿ ನಮ್ಮ ರಾಜ್ಯ ಕ್ಕೆ ಆಶಾದಾಯಕವಾಗಿದೆ. ಆದರೆ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ವರ್ಷಕ್ಕೆ 250 ಕೋಟಿ ರೂಪಾಯಿ ಮೀಸಡಲಿಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಆದರೆ ಈ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದಿರುವುದು ಸ್ವಲ್ಪ ನಿರಾಶೆ ತಂದಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಫ್ಲಿಮೆಂಟರಿ ಬಜೆಟ್‌ನಲ್ಲಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸುತ್ತೇವೆ ಎಂದು ಪದ್ಮರಾಜ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು