3:54 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯರೇ, ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ

04/01/2023, 21:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ. ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ…ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ಸಿಗರು ಯಾವ ಪದ ಬಳಸಿದ್ದಾರೋ ಅದು ಕಾಂಗ್ರೆಸ್ಸಿಗೆ ಅನ್ವಯವಾಗುತ್ತೆ. ಕಾಂಗ್ರೆಸ್ಸಿನಲ್ಲಿ ಮಾತ್ರ ಮುಖ್ಯಮಂತ್ರಿಯನ್ನ ಆ ರೀತಿ ನಡೆಸಿಕೊಳ್ಳುವುದು ಎಂದು ಬಯಧವಾರ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಮುಖ್ಯಮಂತ್ರಿಗಳನ್ನ ಬಾಲ ಅಲುಗಾಡಿಸುವಂತೆ ನೋಡಿಕೊಳ್ಳುತ್ತಿದ್ದದ್ದು ಕಾಂಗ್ರೆಸ್ ಮಾತ್ರ. ವೀರೇಂದ್ರ ಪಾಟೀಲ್ ರಾಜ್ಯ ಕಂಡ ಅಪರೂಪದ, ಪ್ರಭಾವಿ ನಾಯಕ. ಅವರು ಆಸ್ಪತ್ರೆಯಲ್ಲಿದ್ದಾಗ ನೋಡಿಕೊಂಡು ಹೋಗಿ ರಾಜೀವ್ ಗಾಂಧಿ ಏರ್‍ಪೋರ್ಟ್‍ನಲ್ಲಿ ಪದಚ್ಯುತಿಗೊಳಿಸಿದ್ದರು ಎಂದು ಸಿ.ಟಿ. ರವಿ ಖಾರವಾಗಿ ನುಡಿದರು.

ಮುಖ್ಯಮಂತ್ರಿ ಆಡಳಿತ ಪಾಲುದಾರರು ಎಂದು ಪ್ರಧಾನಿ ಭಾವಿಸುತ್ತಾರೆ. ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿದೆ ಎಂದು ಸಿದ್ದರಾಮಯ್ಯ ಭಾವಿಸಿರಬಹುದು, ಅದು ತಪ್ಪು ಕಲ್ಪನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು