3:57 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸಿದ್ಧಿ ಸಮುದಾಯದ ನಾಯಕ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಡಿಯಾಗೋ ಇನ್ನಿಲ್ಲ

13/08/2021, 10:46

ಕಾರವಾರ(reporterkarnataka.com):

ಸಿದ್ಧಿ ಸಮುದಾಯದ ನಾಯಕ, ಹೋರಾಟಗಾರ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಯಲ್ಲಾಪುರ ತೊಟ್ಟಿಲ್ಗುಂಡಿಯ ( ಹಳಿಯಾಳ ) ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನರಾಗಿದ್ದಾರೆ.

ಡಿಯಾಗೋ ಅವರು ತನ್ನ ಬದುಕಿನ ಪೂರ್ತಿ ಸಿದ್ಧಿ ಸಮುದಾಯದ ವಿಕಸನ, ಪಶ್ಚಿಮ ಘಟ್ಟ ಸಂರಕ್ಷಣೆ, ಸಮಾಜ ಸುಧಾರಣೆ ಬಗ್ಗೆ ಹೋರಾಟ ನಡೆಸಿದ್ದಾರೆ.

ತನ್ನ ವೈಯಕ್ತಿಕ ಬದುಕಿನ ಬಗ್ಗೆ ಚಿಂತಿಸದೇ ತನ್ನ ಸಮುದಾಯದ ಮತ್ತು ಸಮಾಜ, ಪ್ರಕೃತಿ ಸಂರಕ್ಷಣೆಯ ಬಗ್ಗೆ ಚಿಂತಿಸುತ್ತಾ ಮತ್ತು ಅದರ ಬಗ್ಗೆ ಕಾರ್ಯ ಪ್ರವೃತ್ತರಾಗಿ ಬಂದಿದ್ದಾರೆ. ಅವರು ಯಲ್ಲಾಪುರದಿಂದ ಆರಂಭಗೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸಿದ್ದಾರೆ.

ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಅವರು ಡಿಯಾಗೋ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಅವರ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡ ಅನುಭವ ಹೊಂದಿದ್ದಾರೆ. ಡಿಯಾಗೋ ಅವರು ಇತ್ತೀಚೆಗೆ ಅನಾರೋಗ್ಯಪೀಡಿತರಾದ ಬಳಿಕವೂ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ಬಂದಿದ್ದಾರೆ.

ಡಿಯಾಗೋ ಅವರ ಸಾವಿನ ಸುದ್ದಿ ಕೇಳಿ ಸಹಿಸಲು ಬಹಳ ಕಷ್ಟವಾಯಿತು. ಅವರ ಹೋರಾಟದ ದಿನಗಳು, ಕೆಚ್ಚೆದಯ ಕ್ಷಣಗಳು , ಸಮುದಾಯದ ಏಳಿಗೆಯ ಬಗ್ಗೆ ಅವರು ತೆಗೆದುಕೊಂಡ ನಿರ್ಣಯಗಳು ನಮ್ಮನ್ನು ಯಾವಾಗಲೂ ಎಚ್ಚರಿಸುವಂತಿದೆ. ಅವರ ಕೊನೆಯ ಆಶೋತ್ತರಗಳನ್ನು ನೆರವೇರಿಸಲು ಪ್ರಯತ್ನ ಆಗಲೇ ಬೇಕಾದ ಅನಿವಾರ್ಯತೆ ಈಗ ನಮ್ಮ ಮುಂದೆ ಇದೆ. 

– ದಿನೇಶ್ ಹೊಳ್ಳ, ಪರಿಸರಪರ ಹೋರಾಟಗಾರ

ಇತ್ತೀಚಿನ ಸುದ್ದಿ

ಜಾಹೀರಾತು