3:49 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಸಿಡ್ನಿ: ಪ್ರಧಾನಿ ಮೋದಿ ಎದುರಲ್ಲೇ ನಡೆಯಲಿದೆ ಕುಡ್ಲದ ಕುವರಿಯ ನಾಟ್ಯ ವೈಭವ!!

22/05/2023, 11:01

ಅಭಿನಯ ಪ್ರವೀಣ್ ಮಂಗಳೂರು

info.reporterkarnataka@gmail.com

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಡ್ನಿಯಲ್ಲಿ ಕುಡ್ಲದ ಕುವರಿ ಎದುರಾಗಲಿದ್ದಾರೆ. ಮೋದಿ ಅವರಿಗೆ ಸ್ವಾಗತ ಕೋರುವ ಅಂಗವಾಗಿ ಸಿಡ್ನಿಯಲ್ಲಿ ಆಯೋಜಿಸಲಾದ ನೃತ್ಯ ಕಾರ್ಯಕ್ರಮದ ನೇತೃತ್ವವನ್ನು ಮಂಗಳೂರಿನ ಅನಿಶಾ ಪೂಜಾರಿ ವಹಿಸಲಿದ್ದಾರೆ.


ಪ್ರಧಾನಿ ಮೋದಿ ಅವರಿಗೆ ಮೇ 23ರಂದು ಸಿಡ್ನಿಯಲ್ಲಿ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಪ್ರಧಾನಿ ಮೋದಿಯವರ ಸಮ್ಮುಖದಲ್ಲಿ ತುಳುನಾಡಿನ ಕುವರಿ ಮಂಗಳೂರು ಬಿಜೈ ಕಾಪಿಕಾಡಿನ ಅನಿಶಾ ಪೂಜಾರಿ ಅವರ ತಂಡ ನಾಟ್ಯ ಪ್ರದರ್ಶನ ನೀಡಲಿದ್ದಾರೆ.

ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಂತರ ಸಮುದಾಯ ಸ್ವಾಗತ ನಡೆಯಲಿದೆ. ಇದರ ಭಾಗವಾಗಿ ನೃತ್ಯ ಕಾರ್ಯಕ್ರಮ ಜರುಗಲಿದೆ.
ಯಾರೀಕೆ ಅನಿಶಾ?: ಅನಿಶಾ ಅವರು ‘ನಾಟ್ಯೋಕ್ತಿ’ ನೃತ್ಯ ಗುಂಪಿನಲ್ಲಿರುವ ಏಕೈಕ ಮಂಗಳೂರಿನವರು. ತಂಡವು ತುಳು ಜಾನಪದ ಮತ್ತು ಕಾಂತಾರ ಚಿತ್ರಗೀತೆಯನ್ನು ಪ್ರದರ್ಶಿಸಲಿದೆ.
ಅನಿಶಾ ಪೂಜಾರಿ ಅವರು ಪದ್ಮನಾಭ ಪೂಜಾರಿ ಮತ್ತು ರೂಪ ಪದ್ಮನಾಭ ದಂಪತಿಯ ಪುತ್ರಿ. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮಂಗಳೂರಿನಲ್ಲಿ ನಡೆಸಿದರು. ನಂತರ ಬಿಬಿಎ ಮತ್ತು ಎಂಬಿಎ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಪೂರೈಸಿದರು. ಪ್ರಸ್ತುತ ಅನಿಶಾ ಕಳೆದ 6 ವರ್ಷಗಳಿಂದ ಸಿಡ್ನಿಯ ಪ್ರಸಿದ್ಧ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು