4:04 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಸಿಕಂದರಾಬಾದ್​​ ಎಲೆಕ್ಟ್ರಿಕ್ ವಾಹನಗಳ ಶೋ ರೂಮ್​ನಲ್ಲಿ ಅಗ್ನಿ ದುರಂತ; ಮಹಿಳೆ ಸಹಿತ 8 ಮಂದಿ ಸಾವು

13/09/2022, 18:41

ಸಿಕಂದರಾಬಾದ್ (reporterkarnataka.com): ಎಲೆಕ್ಟ್ರಿಕ್ ವಾಹನಗಳ ಶೋ ರೂಮ್​ನಲ್ಲಿ ದಿಢೀರ್​ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ  8 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ  ನಡೆದಿದೆ.

ಸಿಕಂದರಾಬಾದ್​​ ಶೋ ರೂಮ್​ನಲ್ಲಿ​ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಶೋ ರೂಮ್​ ಮೇಲ್ಭಾಗದಲ್ಲಿರುವ ಲಾಡ್ಜ್​ನಲ್ಲಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ದುರ್ಮರಣಕ್ಕೀಡಾಗಿದ್ದಾರೆ. ಮೃತರಲ್ಲಿ 7 ಮಂದಿ ಪುರುಷರು ಹಾಗೂ ಓರ್ವ ಮಹಿಳೆ ಸೇರಿದ್ದಾರೆ. ಉಳಿದಂತೆ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೋಮವಾರ ತಡರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ದಟ್ಟ ಹೊಗೆಯಿಂದ ಉಸಿರಾಡಲು ಸಮಸ್ಯೆಯಾಗಿ ಇವರೆಲ್ಲರೂ ದುರ್ಮರಣಕ್ಕೀಡಾಗಿದ್ದಾರೆ. ಮೃತರೆಲ್ಲರೂ 35 ರಿಂದ 40 ವರ್ಷದೊಳಗಿನವರು ಎನ್ನಲಾಗಿದೆ. ಮೃತರನ್ನು ವಿಜಯವಾಡ ಮೂಲದ ಎಂ ಹರೀಶ್​, ಚೆನ್ನೈ ಮೂಲದ ಸೀತಾರಾಮನ್ ಹಾಗೂ ದೆಹಲಿಯ ವೀತೇಂದ್ರ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

ಭೀಕರ ಅಗ್ನಿ ದುರಂತ: ಐದು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿರುವ ಎಲೆಕ್ಟ್ರಿಕ್​ ವಾಹನದ ಶೋರೂಮ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ, ದಟ್ಟ ಹೊಗೆ ಹರಡಿದ್ದು, ಮೇಲ್ಮಹಡಿಯಲ್ಲಿರುವ ಲಾಡ್ಜ್​​ನ ಕೊಠಡಿಯಲ್ಲಿ ಹೊಗೆ ವ್ಯಾಪಿಸಿದೆ. ಅಲ್ಲಿ ವಾಸ್ತವ್ಯ ಹೂಡಿದ್ದ ಅನೇಕರಿಗೆ ಉಸಿರಾಡಲು ಸಮಸ್ಯೆ ಉಂಟಾಗಿ ಸಾವನ್ನಪ್ಪಿದ್ದಾರೆ. ಲಾಡ್ಜ್​ನ ವಿವಿಧ ಕೊಠಡಿ ಹಾಗೂ ಹೊರಗಡೆ ದಟ್ಟ ಹೊಗೆ ಸೇವಿಸಿರುವ ಕಾರಣ ಅನೇಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ವರದಿಯಾಗಿದೆ.

ಹೈದರಾಬಾದ್​​ನ ಪಾಸ್​ಪೋರ್ಟ್ ಕಚೇರಿಯ ಪಕ್ಕದಲ್ಲಿ ರೂಬಿ ಲಕ್ಸುರಿ ಪ್ರೈಡ್​ ಎಂಬ ಐದು ಅಂತಸ್ತಿನ ಕಟ್ಟಡವಿದೆ. ಇದರಲ್ಲಿ ಎಲೆಕ್ಟ್ರಿಕ್​ ವಾಹನಗಳ ಶೋ ರೂಮ್​ ನೆಲಮಾಳಿಗೆಯಲ್ಲಿದ್ದು, ಉಳಿದ ನಾಲ್ಕು ಕಟ್ಟಡಗಳಲ್ಲಿ ಹೋಟೆಲ್​ ಕಮ್​ ಲಾಡ್ಜ್ ಇದೆ. ಸೋಮರಾತ್ರಿ ರಾತ್ರಿ 9:40ರ ವೇಳೆ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​​ನಿಂದ ಈ ಅವಘಡ ಸಂಭವಿಸಿದ್ದು, ತಕ್ಷಣವೇ ಶೋ ರೂಮ್​​ನಲ್ಲಿದ್ದ ಎಲೆಕ್ಟ್ರಿಕ್​ ವಾಹನಗಳ ಬ್ಯಾಟರಿ ಸ್ಫೋಟಗೊಂಡಿವೆ. ಹೀಗಾಗಿ, ವಿಷಕಾರಿ ಹೊಗೆ ಲಾಡ್ಜ್​ ರೂಂಗಳಿಗೆ ವ್ಯಾಪಿಸಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸಚಿವರಾದ ತಲಸಾನಿ ಶ್ರೀನಿವಾಸ್ ಯಾದವ್​, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಹೋಟೆಲ್​​ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. 8 ಜನರು ಸಾವನ್ನಪ್ಪಿದ್ದಾರೆಂದು ಹೈದರಾಬಾದ್​ ಉತ್ತರ ವಲಯದ ಡಿಸಿಪಿ ಚಂದನಾ ದೀಪ್ತಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಕಚೇರಿ ಪರಿಹಾರ ಘೋಷಣೆ: ಸಿಕಂದರಾಬಾದ್​ ಅಗ್ನಿ ಅವಘಡಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಾಣಹಾನಿ ಬೇಸರ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಇದರ ಜೊತೆಗೆ PMNRFನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು