10:14 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸಿಕಂದರಾಬಾದ್​​ ಎಲೆಕ್ಟ್ರಿಕ್ ವಾಹನಗಳ ಶೋ ರೂಮ್​ನಲ್ಲಿ ಅಗ್ನಿ ದುರಂತ; ಮಹಿಳೆ ಸಹಿತ 8 ಮಂದಿ ಸಾವು

13/09/2022, 18:41

ಸಿಕಂದರಾಬಾದ್ (reporterkarnataka.com): ಎಲೆಕ್ಟ್ರಿಕ್ ವಾಹನಗಳ ಶೋ ರೂಮ್​ನಲ್ಲಿ ದಿಢೀರ್​ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ  8 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ  ನಡೆದಿದೆ.

ಸಿಕಂದರಾಬಾದ್​​ ಶೋ ರೂಮ್​ನಲ್ಲಿ​ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಶೋ ರೂಮ್​ ಮೇಲ್ಭಾಗದಲ್ಲಿರುವ ಲಾಡ್ಜ್​ನಲ್ಲಿ ತಂಗಿದ್ದವರಲ್ಲಿ 8 ಮಂದಿ ಉಸಿರುಗಟ್ಟಿ ದುರ್ಮರಣಕ್ಕೀಡಾಗಿದ್ದಾರೆ. ಮೃತರಲ್ಲಿ 7 ಮಂದಿ ಪುರುಷರು ಹಾಗೂ ಓರ್ವ ಮಹಿಳೆ ಸೇರಿದ್ದಾರೆ. ಉಳಿದಂತೆ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೋಮವಾರ ತಡರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ದಟ್ಟ ಹೊಗೆಯಿಂದ ಉಸಿರಾಡಲು ಸಮಸ್ಯೆಯಾಗಿ ಇವರೆಲ್ಲರೂ ದುರ್ಮರಣಕ್ಕೀಡಾಗಿದ್ದಾರೆ. ಮೃತರೆಲ್ಲರೂ 35 ರಿಂದ 40 ವರ್ಷದೊಳಗಿನವರು ಎನ್ನಲಾಗಿದೆ. ಮೃತರನ್ನು ವಿಜಯವಾಡ ಮೂಲದ ಎಂ ಹರೀಶ್​, ಚೆನ್ನೈ ಮೂಲದ ಸೀತಾರಾಮನ್ ಹಾಗೂ ದೆಹಲಿಯ ವೀತೇಂದ್ರ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

ಭೀಕರ ಅಗ್ನಿ ದುರಂತ: ಐದು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿರುವ ಎಲೆಕ್ಟ್ರಿಕ್​ ವಾಹನದ ಶೋರೂಮ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ, ದಟ್ಟ ಹೊಗೆ ಹರಡಿದ್ದು, ಮೇಲ್ಮಹಡಿಯಲ್ಲಿರುವ ಲಾಡ್ಜ್​​ನ ಕೊಠಡಿಯಲ್ಲಿ ಹೊಗೆ ವ್ಯಾಪಿಸಿದೆ. ಅಲ್ಲಿ ವಾಸ್ತವ್ಯ ಹೂಡಿದ್ದ ಅನೇಕರಿಗೆ ಉಸಿರಾಡಲು ಸಮಸ್ಯೆ ಉಂಟಾಗಿ ಸಾವನ್ನಪ್ಪಿದ್ದಾರೆ. ಲಾಡ್ಜ್​ನ ವಿವಿಧ ಕೊಠಡಿ ಹಾಗೂ ಹೊರಗಡೆ ದಟ್ಟ ಹೊಗೆ ಸೇವಿಸಿರುವ ಕಾರಣ ಅನೇಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ವರದಿಯಾಗಿದೆ.

ಹೈದರಾಬಾದ್​​ನ ಪಾಸ್​ಪೋರ್ಟ್ ಕಚೇರಿಯ ಪಕ್ಕದಲ್ಲಿ ರೂಬಿ ಲಕ್ಸುರಿ ಪ್ರೈಡ್​ ಎಂಬ ಐದು ಅಂತಸ್ತಿನ ಕಟ್ಟಡವಿದೆ. ಇದರಲ್ಲಿ ಎಲೆಕ್ಟ್ರಿಕ್​ ವಾಹನಗಳ ಶೋ ರೂಮ್​ ನೆಲಮಾಳಿಗೆಯಲ್ಲಿದ್ದು, ಉಳಿದ ನಾಲ್ಕು ಕಟ್ಟಡಗಳಲ್ಲಿ ಹೋಟೆಲ್​ ಕಮ್​ ಲಾಡ್ಜ್ ಇದೆ. ಸೋಮರಾತ್ರಿ ರಾತ್ರಿ 9:40ರ ವೇಳೆ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​​ನಿಂದ ಈ ಅವಘಡ ಸಂಭವಿಸಿದ್ದು, ತಕ್ಷಣವೇ ಶೋ ರೂಮ್​​ನಲ್ಲಿದ್ದ ಎಲೆಕ್ಟ್ರಿಕ್​ ವಾಹನಗಳ ಬ್ಯಾಟರಿ ಸ್ಫೋಟಗೊಂಡಿವೆ. ಹೀಗಾಗಿ, ವಿಷಕಾರಿ ಹೊಗೆ ಲಾಡ್ಜ್​ ರೂಂಗಳಿಗೆ ವ್ಯಾಪಿಸಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸಚಿವರಾದ ತಲಸಾನಿ ಶ್ರೀನಿವಾಸ್ ಯಾದವ್​, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಹೋಟೆಲ್​​ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. 8 ಜನರು ಸಾವನ್ನಪ್ಪಿದ್ದಾರೆಂದು ಹೈದರಾಬಾದ್​ ಉತ್ತರ ವಲಯದ ಡಿಸಿಪಿ ಚಂದನಾ ದೀಪ್ತಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಕಚೇರಿ ಪರಿಹಾರ ಘೋಷಣೆ: ಸಿಕಂದರಾಬಾದ್​ ಅಗ್ನಿ ಅವಘಡಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಾಣಹಾನಿ ಬೇಸರ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಇದರ ಜೊತೆಗೆ PMNRFನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು