8:59 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ

14/06/2021, 15:01

ಡಿ. ಶರಣ ಗೌಡ ಗೊರಬಾಳ್ ಸಿಂಧನೂರು

info.reporterkarnataka@gmail.com

ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ.

ಮಲ್ಕಪುರ ಗ್ರಾಮದ ಸುಮಾರು 60ರ ಹರೆಯದ ಪಂಪಣ್ಣ ಎಂಬ ರೈತರು ಗೊರೆಬಾಳ ಗ್ರಾಮದಿಂದ ಭತ್ತ ಮಾರಿದ(ನೆಲ್ಲ ಪಟ್ಟಿ)ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಲೂಟಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8.20 ಸುಮಾರಿಗೆ ಪಂಪಣ್ಣ ಅವರು ಶ್ರೀಪುರಂ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಹಾಕಿಸಿಕೊಂಡು ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಮಲ್ಕಪುರ ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪಂಪಣ್ಣ ಅವರ ಬೈಕನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ರೀತಿಯಲ್ಲಿ ‘ನೀನು ಗಾಂಜಾ ಸಾಗಣಿಕೆ ಮಾಡುತ್ತಿದ್ದು ನಿನ್ನನ್ನು ತಪಾಸಣೆ ತಪಾಸಣೆ ಮಾಡಬೇಕು’ ಎಂದು ಬೆದರಿಸಿ ರೈತನ ಬಳಿ ಇರುವ 48,500ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು