1:08 PM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ

14/06/2021, 15:01

ಡಿ. ಶರಣ ಗೌಡ ಗೊರಬಾಳ್ ಸಿಂಧನೂರು

info.reporterkarnataka@gmail.com

ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ.

ಮಲ್ಕಪುರ ಗ್ರಾಮದ ಸುಮಾರು 60ರ ಹರೆಯದ ಪಂಪಣ್ಣ ಎಂಬ ರೈತರು ಗೊರೆಬಾಳ ಗ್ರಾಮದಿಂದ ಭತ್ತ ಮಾರಿದ(ನೆಲ್ಲ ಪಟ್ಟಿ)ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಲೂಟಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8.20 ಸುಮಾರಿಗೆ ಪಂಪಣ್ಣ ಅವರು ಶ್ರೀಪುರಂ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಹಾಕಿಸಿಕೊಂಡು ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಮಲ್ಕಪುರ ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪಂಪಣ್ಣ ಅವರ ಬೈಕನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ರೀತಿಯಲ್ಲಿ ‘ನೀನು ಗಾಂಜಾ ಸಾಗಣಿಕೆ ಮಾಡುತ್ತಿದ್ದು ನಿನ್ನನ್ನು ತಪಾಸಣೆ ತಪಾಸಣೆ ಮಾಡಬೇಕು’ ಎಂದು ಬೆದರಿಸಿ ರೈತನ ಬಳಿ ಇರುವ 48,500ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು