9:07 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ

14/06/2021, 15:01

ಡಿ. ಶರಣ ಗೌಡ ಗೊರಬಾಳ್ ಸಿಂಧನೂರು

info.reporterkarnataka@gmail.com

ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ.

ಮಲ್ಕಪುರ ಗ್ರಾಮದ ಸುಮಾರು 60ರ ಹರೆಯದ ಪಂಪಣ್ಣ ಎಂಬ ರೈತರು ಗೊರೆಬಾಳ ಗ್ರಾಮದಿಂದ ಭತ್ತ ಮಾರಿದ(ನೆಲ್ಲ ಪಟ್ಟಿ)ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಲೂಟಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8.20 ಸುಮಾರಿಗೆ ಪಂಪಣ್ಣ ಅವರು ಶ್ರೀಪುರಂ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಹಾಕಿಸಿಕೊಂಡು ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಮಲ್ಕಪುರ ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪಂಪಣ್ಣ ಅವರ ಬೈಕನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ರೀತಿಯಲ್ಲಿ ‘ನೀನು ಗಾಂಜಾ ಸಾಗಣಿಕೆ ಮಾಡುತ್ತಿದ್ದು ನಿನ್ನನ್ನು ತಪಾಸಣೆ ತಪಾಸಣೆ ಮಾಡಬೇಕು’ ಎಂದು ಬೆದರಿಸಿ ರೈತನ ಬಳಿ ಇರುವ 48,500ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು