5:36 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ

14/06/2021, 15:01

ಡಿ. ಶರಣ ಗೌಡ ಗೊರಬಾಳ್ ಸಿಂಧನೂರು

info.reporterkarnataka@gmail.com

ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ.

ಮಲ್ಕಪುರ ಗ್ರಾಮದ ಸುಮಾರು 60ರ ಹರೆಯದ ಪಂಪಣ್ಣ ಎಂಬ ರೈತರು ಗೊರೆಬಾಳ ಗ್ರಾಮದಿಂದ ಭತ್ತ ಮಾರಿದ(ನೆಲ್ಲ ಪಟ್ಟಿ)ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಲೂಟಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8.20 ಸುಮಾರಿಗೆ ಪಂಪಣ್ಣ ಅವರು ಶ್ರೀಪುರಂ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಹಾಕಿಸಿಕೊಂಡು ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಮಲ್ಕಪುರ ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪಂಪಣ್ಣ ಅವರ ಬೈಕನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ರೀತಿಯಲ್ಲಿ ‘ನೀನು ಗಾಂಜಾ ಸಾಗಣಿಕೆ ಮಾಡುತ್ತಿದ್ದು ನಿನ್ನನ್ನು ತಪಾಸಣೆ ತಪಾಸಣೆ ಮಾಡಬೇಕು’ ಎಂದು ಬೆದರಿಸಿ ರೈತನ ಬಳಿ ಇರುವ 48,500ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು