3:26 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಆಸ್ತಿಗಾಗಿ ಸಾಕು ತಾಯಿಯನ್ನೇ ಕೊಂದ ಪಾಪಿ ಪುತ್ರಿ: ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ

13/11/2025, 18:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಸ್ತಿಗಾಗಿ ಸಾಕು ತಾಯಿಯನ್ನೇ ಪಾಪಿ ಮಗಳೊಬ್ಬಳು ಕೊಂದ ಘಟನೆ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ನಡೆಯಿತು.

ಒಂದೂವರೆ ಎಕರೆ ಜಮೀನು ಹಾಗೂ ಮನೆಗಾಗಿ ಅಮ್ಮನನ್ನೇ ಕೊಲೆಗೈದಿದ್ದಾಳೆ ಎಂದು ಆರೋಪಿಸಲಾಗಿದೆ. ಕುಸುಮ (62) ಮಗಳಿಂದಲೇ ಕೊಲೆಯಾದ ನತದೃಷ್ಟ ತಾಯಿ.
ಸುಧಾ (35) ಆಸ್ತಿಗಾಗಿ ಅಮ್ಮನ ಕೊಂದ ಮಗಳು.
ಅಮ್ಮ ರಾತ್ರಿ ಮಲಗಿದ್ದಾಗ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ದೂರಲಾಗಿದೆ. ಕೂಲಿಗಾಗಿ ಬೇರೆ ಊರಿನಿಂದ ಬಂದು ಬಂಡಿಮಠದಲ್ಲಿ ವಾಸವಿದ್ದ ಕುಟುಂಬ ಇದಾಗಿದೆ.
ಊರಿನಲ್ಲಿರೋ ಆಸ್ತಿ ಕೈತಪ್ಪುತ್ತೆ ಎಂದು ತಾಯಿಯನ್ನೇ ಮಗಳು ಕೊಂದು ಹಾಕಿದ್ದಾಳೆ.
ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು