4:59 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವಾರ್ಷಿಕ ಸಂಭ್ರಮೋತ್ಸವ: ಪ್ರಶಸ್ತಿ ಪ್ರದಾನ

25/09/2021, 19:32

ಬೆಂಗಳೂರು(reporterkarnataka.com): ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವರ್ಷದ ವಾರ್ಷಿಕ ಸಂಭ್ರಮೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದ ಆಡಿಟೋರಿಯಂ ಆವರಣದಲ್ಲಿ ಶನಿವಾರ ನಡೆಯಿತು.

ಪ್ರತಿಷ್ಠಾನದ ಗೌರವಾಧ್ಯಕ್ಷ ಹಾಗೂ ಸಮಾಜ ಸೇವಕ ಬನ್ನೂರಿನ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅಧ್ಯಕ್ಷತೆ ವಹಿಸಿದ್ದರು.

ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಜನಪದೋತ್ಸವ ಮತ್ತು ಹಿರಿಯ ಸಾಹಿತಿಗಳಿಗೆ ಗೌರವಾರ್ಥವಾಗಿ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ ನಡೆಯಿತು.

ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆಯನ್ನು ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಮತ್ತು ಬನ್ನೂರಿನ ಸಮಾಜ ಸೇವಕ ಡಾ.ಕೆ.ಮಹೇಂದ್ರ ಸಿಂಗ್ ರಾಜ್ ಪುರೋಹಿತ್ ಕಾಳಪ್ಪ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ರಮೇಶ್ ಸುರ್ವೆ, ಕಲ್ಮೇಶ್ವರ ಸ್ವಾಮಿಗಳು, ಸಾಹಿತಿಗಳಾದ ಡಾ.ಭದ್ರಾವತಿ ರಾಮಾಚಾರಿ, ಪ್ರತಿಷ್ಠಾನದ ಸಂಚಾಲಕರುಗಳಾದ ಬಿ.  ಎಚ್.ಹೋಂಗಲ್, ಉಲ್ಲಾಸ್ ರಾವ್ ರೇಣುಕೆ, ರಾಜ್ ಸಂಪಾಜೆ, ಕರಿಬಸಪ್ಪ ವೈ.ಶೋಗಿ ಅವರು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಇನ್ನು ಇದೆ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ,ತಾಲ್ಲೂಕುಗಳಿಂದ ಆಗಮಿಸಿದ ಕಲಾ ತಂಡದ ಕಲಾವಿದರಿಂದ ವಚನ ಗಾಯನ, ಜಾನಪದ ಗಾಯನ, ನೃತ್ಯ ಪ್ರದರ್ಶನ ಹೀಗೆ ಅನೇಕ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇದೆ ವೇಳೆ ಬಾಗಲಕೋಟೆ ಜಿಲ್ಲೆಯ ನಗರಾಳ ಗ್ರಾಮದ ಯೋಗಪಟು ವಿಷ್ಣು ನ್ಯಾಮಗೌಡರು ರವರ ಯೋಗ ಪ್ರದರ್ಶನವನ್ನು ಕಂಡು ಮತ್ತು ನಿರೂಪಣೆ ಮಾಡಿದ್ದ ರಾಜ್ ಸಂಪಾಜೆ ಅವರಿಗೆ ಪ್ರತಿಷ್ಠಾನ ಟ್ರಸ್ಟ್ ನ ಗೌರವಾಧ್ಯಕ್ಷ ಡಾ.ಕೆ.ಮಹೇಂದ್ರ ಸಿಂಗ್ ಕಾಳಪ್ಪ ಅವರು ಧನಸಹಾಯ ಮಾಡಿ ಸನ್ಮಾನಿಸಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು