4:15 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸಿರಿ ಮಹಾಕಾವ್ಯವು ಸ್ತ್ರೀ ಸಂವೇದನೆ, ಸ್ವಾತಂತ್ರ್ಯದ ಪ್ರತೀಕ: ಲಿಟ್ ಫೆಸ್ಟ್ ನಲ್ಲಿ ಡಾ ಗಾಯತ್ರಿ ನಾವಡ

21/01/2024, 20:56

ಮಂಗಳೂರು(reporterkarnataka.com):ಸಿರಿ ಮಹಾಕಾವ್ಯವು ಸ್ತ್ರೀ ಸಂವೇದನೆ, ಸ್ವಾತಂತ್ರ್ಯದ ಪ್ರತೀಕವಾಗಿದೆ. ಸಿರಿಯು ಸ್ಟ್ರೀತನಕ್ಕೆಆತ್ಮಶಕ್ತಿಯಾಗಿದ್ದಾಳೆ, ಮಾದರಿಯಾಗಿದ್ದಾಳೆ ಎಂದು ಡಾ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು.
ನಗರದ ಟಿ.ಎಂ.ಎ. ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಮಂಗಳೂರು ಸಾಹಿತ್ಯೋತ್ಸವ ಲಿಟ್ ಫೆಸ್ಟ್ ನಲ್ಲಿ ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವದಲ್ಲಿ ಡಾ ಗಾಯತ್ರಿ ನಾವಡ ಮಾತನಾಡಿದರು.

ಕೌಟುಂಬಿಕ, ಆರ್ಥಿಕ, ಸಾಮಾಜಿಕ ಸಮಸ್ಯೆಗಳನ್ನ ಎದುರಿಸಿ ಹೆಣ್ಣು ನಮಗೆ ಮಾದರಿಯಾಗಿ, ಲಿಂಗರಾಜಕಾರಣದಿಂದ ಎದ್ದು ಬಂದ ಕಾರಣ ತುಳುನಾಡಿನಲ್ಲಿ ಆರಾಧಿಸಲ್ಪಡುತ್ತಾಳೆ. ಸಿರಿಜಾತ್ರೆಯಲ್ಲಿ ನಾವು ಗಮನಿಸುವುದು ಸಿರಿಪಾತ್ರಧಾರಿಯಾದವರಿಗೆ ಅನುಭಾವಿಕ ಲೋಕವೊಂದು ಸೃಷ್ಟಿಯಾಗುತ್ತದೆ. ಭಾರತೀಯ ಮತ್ತು ಪಾಶ್ಚಾತ್ಯ ಸ್ತ್ರೀವಾದದಲ್ಲಿ ನಮಗೆ ಕಾಣುವುದು ಸಂಪೂರ್ಣ ತದ್ವರುದ್ಧವಾದ ಆಲೋಚನೆಗಳು. ಭಾರತೀಯ ಕರಾವಳಿಯ ಸಂಸ್ಕೃತಿಯಲ್ಲಿ ಮಹಿಳೆ ಮಾತೃ ರೂಪಿಯಾಗಿ ಕಾಣಿಸುತ್ತಾಳೆ, ಇದುವೇ ನಮ್ಮ ವಿಶೇಷತೆ ಎಂದರು.

ಈಗಿರುವ ತುಳುನಾಡಿನ ಎಲ್ಲಾ ಆಚರಣೆಗಳು ಹಿರಿಯರ ಮಾರ್ಗದರ್ಶನದಿಂದಲೇ ನಡೆದುಕೊಂಡು ಬಂದಿದೆ. ಅದಕ್ಕೇ ನಮ್ಮ ಪ್ರಾಮುಖ್ಯತೆ. ಬೇರೆ ಯಾವ ದೈವಾರಾಧನೆಗೂ ಸಿರಿಯ ಆರಾಧನೆಗೂ ಸ್ಪಷ್ಟ ವ್ಯತ್ಯಾಸವಿದೆ. ತುಳುನಾಡಿನ ವಿವಿಧ ಪ್ರದೇಶಗಳಲ್ಲಿ ಸಿರಿ ಜಾತ್ರೆ, 7 ಸಿರಿಯರು ಮತ್ತು ಕುಮಾರನ ಆರಾಧನೆಗಳಲ್ಲಿ ಪ್ರತ್ಯೇಕತೆಗಳಿವೆ. ದಬ್ಬಾಳಿಕೆಗಳೆಲ್ಲವನ್ನು ಮೀರಿ ಸಿರಿ ಹೊರಬಂದಿರುವುದು ಒಂದು ಶಕ್ತಿ ಎಂದು ರವೀಶ್ ಪಡುಮಲೆ ಹೇಳಿದರು.
ವಿವೇಕಾದಿತ್ಯ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು