10:42 PM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

‘ಸಿರಿಧಾನ್ಯ’ ಹಬ್ಬದ ಸಂಭ್ರಮ: ವಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ, ಜಿಪಂ ಸಿಇಒ

29/12/2023, 19:48

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ ‘ಸಿರಿಧಾನ್ಯ ನಡಿಗೆ’ಗೆ ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಭಾಸ್ಕರ್ ಗಾಳಿ ಬುರುಡೆಗಳನ್ನು ಹಾರಿಬಿಟ್ಟು, ಹಸಿರು ನಿಶಾನೆ ಬೀಸಿ ಚಾಲನೆ ನೀಡಿದರು. ಗಣ್ಯರೊಂದಿಗೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನಾಗರಿಕರು ‘ಸಮೃದ್ಧ ಸಿರಿಧಾನ್ಯ’ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ತಮ್ಮ ಎಂದಿನ ಬೆಳಗಿನ ವ್ಯಾಯಾಮವನ್ನು ವಿದ್ಯಾರ್ಥಿಗಳೊಂದಿಗೆ ಮಾಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಸಿರಿಧಾನ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಸುಮಾ, ಕೃಷಿ ಇಲಾಖೆಯ ಉಪನಿರ್ದೇಶಕರು ಭವ್ಯರಾಣಿ, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಡೀನ್ ಡಾ. ಶಿವರಾಮ್, ತೋಟಗಾರಿಕೆ ಉಪನಿರ್ದೇಶಕರಾದ ಕುಮಾರಸ್ವಾಮಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಎಸ್.ಎಂ ಶ್ರೀನಿವಾಸ್, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು ಶಿವನಂದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗೀತಾ, ಕೃಷಿ ಅಧೀಕ್ಷಕರು ಮಂಜುನಾಥ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು