4:05 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

‘ಸಿರಿಧಾನ್ಯ’ ಹಬ್ಬದ ಸಂಭ್ರಮ: ವಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ, ಜಿಪಂ ಸಿಇಒ

29/12/2023, 19:48

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ ‘ಸಿರಿಧಾನ್ಯ ನಡಿಗೆ’ಗೆ ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಭಾಸ್ಕರ್ ಗಾಳಿ ಬುರುಡೆಗಳನ್ನು ಹಾರಿಬಿಟ್ಟು, ಹಸಿರು ನಿಶಾನೆ ಬೀಸಿ ಚಾಲನೆ ನೀಡಿದರು. ಗಣ್ಯರೊಂದಿಗೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನಾಗರಿಕರು ‘ಸಮೃದ್ಧ ಸಿರಿಧಾನ್ಯ’ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ತಮ್ಮ ಎಂದಿನ ಬೆಳಗಿನ ವ್ಯಾಯಾಮವನ್ನು ವಿದ್ಯಾರ್ಥಿಗಳೊಂದಿಗೆ ಮಾಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಸಿರಿಧಾನ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಸುಮಾ, ಕೃಷಿ ಇಲಾಖೆಯ ಉಪನಿರ್ದೇಶಕರು ಭವ್ಯರಾಣಿ, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಡೀನ್ ಡಾ. ಶಿವರಾಮ್, ತೋಟಗಾರಿಕೆ ಉಪನಿರ್ದೇಶಕರಾದ ಕುಮಾರಸ್ವಾಮಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಎಸ್.ಎಂ ಶ್ರೀನಿವಾಸ್, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು ಶಿವನಂದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗೀತಾ, ಕೃಷಿ ಅಧೀಕ್ಷಕರು ಮಂಜುನಾಥ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು