4:43 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

‘ಸಿರಿಧಾನ್ಯ’ ಹಬ್ಬದ ಸಂಭ್ರಮ: ವಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ, ಜಿಪಂ ಸಿಇಒ

29/12/2023, 19:48

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ ‘ಸಿರಿಧಾನ್ಯ ನಡಿಗೆ’ಗೆ ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಭಾಸ್ಕರ್ ಗಾಳಿ ಬುರುಡೆಗಳನ್ನು ಹಾರಿಬಿಟ್ಟು, ಹಸಿರು ನಿಶಾನೆ ಬೀಸಿ ಚಾಲನೆ ನೀಡಿದರು. ಗಣ್ಯರೊಂದಿಗೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನಾಗರಿಕರು ‘ಸಮೃದ್ಧ ಸಿರಿಧಾನ್ಯ’ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ತಮ್ಮ ಎಂದಿನ ಬೆಳಗಿನ ವ್ಯಾಯಾಮವನ್ನು ವಿದ್ಯಾರ್ಥಿಗಳೊಂದಿಗೆ ಮಾಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಸಿರಿಧಾನ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಸುಮಾ, ಕೃಷಿ ಇಲಾಖೆಯ ಉಪನಿರ್ದೇಶಕರು ಭವ್ಯರಾಣಿ, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಡೀನ್ ಡಾ. ಶಿವರಾಮ್, ತೋಟಗಾರಿಕೆ ಉಪನಿರ್ದೇಶಕರಾದ ಕುಮಾರಸ್ವಾಮಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಎಸ್.ಎಂ ಶ್ರೀನಿವಾಸ್, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು ಶಿವನಂದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗೀತಾ, ಕೃಷಿ ಅಧೀಕ್ಷಕರು ಮಂಜುನಾಥ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು