9:55 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿರಿಯಾದಲ್ಲಿ ತರಬೇತಿ ಪಡೆದು ಪ್ರವೀಣ್ ಹತ್ಯೆ ಮಾಡಲಾಗಿದೆ: ಕೇಂದ್ರ ಸಚಿವೆ ಕರಂದ್ಲಾಜೆ

31/07/2022, 16:24

ಸುಳ್ಯ:(Reporterkarnataka.com) ಪ್ರವೀಣ್ ನೆಟ್ಟಾರು ಚಲನವಲನ ಗೊತ್ತಿದ್ದ ಸ್ಥಳೀಯರು ಟಾರ್ಗೆಟ್ ಮಾಡಿ ಹತ್ಯೆ ಮಾಡಿದ್ದಾರೆ. ಕೇರಳ ಮಾದರಿಯಲ್ಲಿ ಕುತ್ತಿಗೆ ಕಡಿದು ಕೊಲ್ಲಲಾಗಿದೆ. ಇದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಲೆ ಮಾಡುವ ರೀತಿಯಾಗಿದ್ದು, ಅವರು ಸಿರಿಯಾಗೆ ಹೋಗಿ ತರಬೇತಿ ಪಡೆದು ಹತ್ಯೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಮನೆಗೆ ಭಾನುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಸಾವು ನಮಗೆ ದುಃಖ ತಂದಿದೆ. ಸಮಾಜದಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ. ಪಿಎಫ್‌ಐ ಬ್ಯಾನ್ ಮಾಡಲು ಅಗತ್ಯ ಮಾಹಿತಿಬೇಕಾಗಿದ್ದು ಸದ್ಯ ಕೇಂದ್ರ ಸರ್ಕಾರ ಮಾಹಿತಿ ಸಂಗ್ರಹಿಸುತ್ತಿದೆ. ಇಂತಹ ಘಟನೆಗಳಾದಾಗ ಆಕ್ರೋಶ ಉಂಟಾಗುವುದು ಸಹಜ. ಅದು ನಮಗೂ ಇದೆ. ಆದರೆ ಆಕ್ರೋಶದ ಹಿಂದೆ ನಮ್ಮ ಹುಡುಗನನ್ನು ಕಳೆದುಕೊಂಡ ನೋವಿದೆ. ಆದ್ದರಿಂದ ‌ಕಾನೂನು ಮೂಲಕ ಇದರ ವಿರುದ್ಧ ಹೋರಾಟವಾಗಬೇಕಿದೆ ಎಂದರು.

ಮಸೂದ್ ಹತ್ಯೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ, ಮಸೂದ್ ಹತ್ಯೆ ಷಡ್ಯಂತ್ರದ ಕೊಲೆ ಅಲ್ಲ. ಅದು ಬೇರೆ ರೀತಿಯ ಕೊಲೆ. ರಾಜಿ ಮಾತುಕತೆಗೆ ಕರೆದು ಕೊಲೆ ಮಾಡಲಾಗಿದೆ. ಅದು ದೇಶದ್ರೋಹದ ಜೊತೆ ಜೋಡಿಸಿಕೊಂಡಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು