11:13 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

SIT | ಧರ್ಮಸ್ಥಳ ಪ್ರಕರಣ: ದೂರುದಾರನಿಂದ ಶವ ಹೂತಿಟ್ಟ 15 ಸ್ಥಳಗಳ ಮಾರ್ಕಿಂಗ್: ಪ್ರತಿ ಜಾಗಕ್ಕೆ ಇಬ್ಬರು ಗನ್ ಮ್ಯಾನ್ ಗಳ ನಿಯೋಜನೆ

28/07/2025, 20:56

ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ
ಮಹಜರು ನಡೆಸಲು ಬಂದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ದೂರದಾರ ಶವಗಳನ್ನು ಹೂತಿಟ್ಟ 15 ಸ್ಥಳಗಳನ್ನು ಈಗಾಗಲೇ
ತೋರಿಸಿದ್ದು, ಎಸ್ಐಟಿ ತಂಡ ಅದನ್ನು ಮಾರ್ಕ್ ಮಾಡಿದೆ. ಈ ಜಾಗಕ್ಕೆ ಒಟ್ಟು 30 ಮಂದಿ ಶಸ್ತ್ರ ಸಜ್ಕಿತ ಕಮಾಂಡೋಗಳನ್ನು ನಿಯೋಜಿಸಿದೆ.
ದೂರುದಾರನ ಎರಡು ದಿನ ಸಮಗ್ರ ವಿಚಾರಣೆಗೊಳಪಡಿಸಿದ ಎಸ್ಐಟಿ ತಂಡ ಇಂದು ಸ್ಥಳ ಮಹಜರಿಗೆ ಧರ್ಮಸ್ಥಳಕ್ಕೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಕರೆ ತಂದಿತ್ತು. ಧರ್ಮಸ್ಥಳ ಸ್ನಾನಘಟ್ಟ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಎಸ್ಐಟಿ ತಂಡದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ಆರಂಭಿಸಿತ್ತು. ಸಂಜೆಯ ವೇಳೆಗೆ ಒಟ್ಟು 15 ಸ್ಥಳಗಳನ್ನು ದೂರುದಾರ ಎಸ್ಐಟಿ ಸಮ್ಮಖದಲ್ಲಿ ತೋರಿಸಿದ್ದು, ಅದನ್ನು ಸೀಲ್ ಮಾಡಿ ನಂಬರ್ ನೀಡಲಾಗಿದೆ.
ಮಾರ್ಕ್ ಮಾಡಲಾದ ಪ್ರತಿ ಸ್ಥಳಕ್ಕೆ ಇಬ್ಬರು ಗನ್ ಮ್ಯಾನ್ ಗಳನ್ನು ರಕ್ಷಣೆಗಾಗಿ ನಿಯೋಜಿಸಲಾಗಿದೆ. ಮಾರ್ಕ್ ಮಾಡಲಾದ ಒಟ್ಟು 15 ಸ್ಥಳಗಳಿಗೆ ಒಟ್ಟು 30 ಮಂದಿ ಎಎನ್ ಎಫ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ದಟ್ಟ ಕಾಡಿನಲ್ಲಿ ಹಗಲು- ರಾತ್ರಿ ಗನ್ ಮ್ಯಾನ್ ಗಳು ಶವ ಹೂತ್ತಿಟ್ಟ ಸ್ಥಳವನ್ನು ಕಾಯಲಿದ್ದಾರೆ.
ಇಂದು ಬೆಳಗ್ಗೆ ದೂರುದಾರನ ಜತೆ ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿಯ ಕಾಡಿನೊಳಗೆ ಎಸ್ಐಟಿ ತಂಡ ಆಗಮಿಸಿತ್ತು. ದೂರದಾರನಿಗೆ ಸಂಪೂರ್ಣ ಕಪ್ಪು ಬಣ್ಣದ ವಸ್ತ್ರ ಹಾಕಿಸಿ, ಮುಖಕ್ಕೆ ಕಪ್ಪು ಬಣ್ಣದಿಂದಲೇ ಕವರ್ ಮಾಡಿಸಿ ಕರೆದು ತಂದಿದ್ದರು. ಎಸ್ ಐಟಿ ತಂಡದ ಹಿರಿಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಫೊರೆನ್ಸಿಕ್ ತಜ್ಞರು ಸಾಥ್ ನೀಡಿದ್ದರು. ಶವಗಳನ್ನು ಹೂತ ಜಾಗವನ್ನು ಗುರುತಿಸುವ ಪ್ರಕ್ರಿಯೆ ಭರದಿಂದ ನಡೆಯಿತು. ಸಂಜೆ ವೇಳೆಗೆ 15 ಸ್ಥಳಗಳನ್ನು ಮಾರ್ಕ್ ಮಾಡಲಾಯಿತು.


ಕಳೆದ ಎರಡು ದಿನಗಳಿಂದ ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿ ತಂಡದಿಂದ ದೂರುದಾರನ ವಿಚಾರಣೆ ನಡೆಸಿತ್ತು. ಮೊದಲ ದಿನ ಐಪಿಎಸ್ ಅಧಿಕಾರಿ ಅನುಚೇತ್ ಅವರು ವಿಚಾರಣೆ ನಡೆಸಿದ್ದರು. ಎರಡನೇ ದಿನ ಎಸ್ ಐಟಿ ತಂಡದ ಮುಖ್ಯಸ್ಥ ಪ್ರಣವ್ ಮೊಹಂತಿಯವರೇ ಮಂಗಳೂರಿಗೆ ಆಗಮಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದರು. ಮೊದಲ ದಿನವೇ ದೂರುದಾರ ಸ್ಫೋಟಕ ಮಾಹಿತಿಯನ್ನು ನೀಡಿದ ಹಿನ್ನೆಲೆಯಲ್ಲಿ ಎರಡನೇ ದಿನವಾದ ನಿನ್ನೆ ಸ್ವತಃ ಟೀಮ್ ಮುಖ್ಯಸ್ಥ ಮೊಹಂತಿ ಆಗಮಿಸಿದ್ದರು ಎನ್ನಲಾಗಿದೆ. ಇದಕ್ಕೆಲ್ಲ ಪುಷ್ಠಿ ನೀಡುವಂತೆ ಮಾರ್ಕಿಂಗ್ ಕೆಲಸ ಇಂದು ಆರಂಭವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು