8:02 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಮಹಿಳಾ ಆಯೋಗದ ಒತ್ತಾಯಕ್ಕೆ ಮಣಿದ ಸರಕಾರ

20/07/2025, 14:20

ಮಂಗಳೂರು(reporterkarnataka.com): ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಶವಗಳನ್ನು ಹೂತಿರುವ ಬಗ್ಗೆ ಹಾಗೂ ಇಲ್ಲಿಯ ಅಸ್ವಾಭಾವಿಕ ಸಾವು, ಕೊಲೆ ಪ್ರಕರಣಗಳ ಕುರಿತಾಗಿ ತನಿಖೆ ನಡೆಸಲು ಸರಕಾರ ವಿಶೇಷ ತನಿಖಾ ತಂಡ(Special Investigation Team)ವನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಧರ್ಮಸ್ಥಳ ಸುತ್ತಮುತ್ತ ಶವಗಳನ್ನು ಹೂತಿಟ್ಟ ಬಗ್ಗೆ ವ್ಯಕ್ತಿಯೋರ್ವರು ನ್ಯಾಯಾಲಯಕ್ಕೆ ಹೇಳಿಕೆಯನ್ನು ನೀಡಿದ್ದು ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿ ಬಗ್ಗೆ ಕುಟುಂಬದವರು ನೀಡಿದ ಮಾಹಿತಿಗಳನ್ನು ಆಧರಿಸಿ ಮಹಿಳಾ ಆಯೋಗ ಸರಕಾರಕ್ಕೆ ವಿಶೇಷ ತನಿಖಾ ತಂಡ ರಚನೆಗೆ ಆಗ್ರವಹನ್ನು ಮಾಡಿತ್ತು. ಇದೀಗ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ ೨೦ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕ ಸಾವು, ಕೊಲೆ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರಣವ ಮೋಹಂತಿ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಕಗೊಳಿಸಲಾಗಿದ್ದು, ಉಪ ಪೊಲೀಸ್ ಮಹಾ ನಿರೀಕ್ಷಕರಾದ ಎಂ.ಎನ್.ಅನುಚೇತ್, ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತ, ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು