6:58 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಆರಂಭ

28/07/2025, 15:25

ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ದೂರದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಇಂದು ಆರಂಭಿಸಿದೆ.


ನೇತ್ರಾವತಿ ಸೇತುವೆಯ ಬಳಿಯ ಕಾಡಿನೊಳಗೆ ಎಸ್ಐಟಿ ತಂಡ ದೂರದಾರನನ್ನು ಸಂಪೂರ್ಣ ಕಪ್ಪು ಮುಸುಕಿನ ವಸ್ತ್ರ ಧರಿಸಿ ಕರೆದು ತಂದಿದೆ. ಎಸ್ ಐಟಿ ತಂಡದ ಹಿರಿಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಫೊರೆನ್ಸಿಕ್ ತಜ್ಞರು ಸಾಥ್ ನೀಡಿದ್ದಾರೆ. ಶವಗಳನ್ನು ಹೂತ ಜಾಗವನ್ನು ಗುರುತಿಸುವ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ.
ಕಳೆದ ಎರಡು ದಿನಗಳಿಂದ ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿ ತಂಡದಿಂದ ದೂರುದಾರನ ವಿಚಾರಣೆ ನಡೆದಿದೆ. ಮೊದಲ ದಿನ ಐಪಿಎಸ್ ಅಧಿಕಾರಿ ಅನುಚೇತ್ ಅವರು ವಿಚಾರಣೆ ನಡೆಸಿದ್ದರು. ಎರಡನೇ ದಿನ ಎಸ್ ಐಟಿ ತಂಡದ ಮುಖ್ಯಸ್ಥ ಪ್ರಣವ್ ಮೊಹಂತಿಯವರೇ ಮಂಗಳೂರಿಗೆ ಆಗಮಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದರು. ಮೊದಲ ದಿನವೇ ದೂರುದಾರ ಸ್ಫೋಟಕ ಮಾಹಿತಿಯನ್ನು ನೀಡಿದ ಹಿನ್ನೆಲೆಯಲ್ಲಿ ಎರಡನೇ ದಿನವಾದ ನಿನ್ನೆ ಸ್ವತಃ ಟೀಮ್ ಮುಖ್ಯಸ್ಥ ಮೊಹಂತಿ ಆಗಮಿಸಿದ್ದರು ಎನ್ನಲಾಗಿದೆ. ಇದಕ್ಕೆಲ್ಲ ಪುಷ್ಠಿ ನೀಡುವಂತೆ ಇಂದು ಸ್ಥಳ ಮಹಜರು ಆರಂಭವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು