9:29 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಎಸ್ಐಟಿ ಇನ್ಸ್ ಪೆಕ್ಟರ್ ಧರ್ಮಸ್ಥಳ ಗ್ರಾಪಂಗೆ ಭೇಟಿ: ಯುಡಿಆರ್ ದಾಖಲೆ, ಅಧಿಕಾರಿಗಳ ವಿವರ ಸಂಗ್ರಹ

06/08/2025, 18:11

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ 1995ರಿಂದ 2014ರ ವರೆಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳ ದಾಖಲೆಗಳನ್ನು ಸಂಗ್ರಹಿಸಲು ಇಂದು ವಿಶೇಷ ತನಿಖಾ ತಂಡದ (ಎಸ್ಐಟಿ) ಇನ್ಸ್ ಪೆಕ್ಟರೊಬ್ಬರು ಪಂಚಾಯಿತಿಗೆ ಭೇಟಿ ನೀಡಿದ್ದಾರೆ.
ಎಸ್ಐಟಿ ಇನ್ಸ್ ಪೆಕ್ಟರ್ ಸಂಪತ್ ಅವರು ಧರ್ಮಸ್ಥಳ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ವಿವರಗಳನ್ನು ಕಲೆ ಹಾಕಿದ್ದಾರೆ.
ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳ ವಿವರ ಹಾಗೂ ಅಸಹಜ ಸಾವಿನ(ಯುಡಿಆರ್) ದಾಖಲೆಗಳನ್ನು ಇನ್ಸ್ ಪೆಕ್ಟರ್ ಸಂಪತ್ ಅವರು ಸಂಗ್ರಹಿಸಿದ್ದಾರೆ.
ಅನಾಮಿಕ ದೂರುದಾರ ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ಆರಂಭಿಸಲಾಗಿದೆ. ದೂರುದಾರ ಕಾರ್ಮಿಕನು 1995ರಿಂದ 2014ರ ವರೆಗೆ ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೃತದೇಹವನ್ನು ಅಧಿಕಾರಿಗಳ ಸೂಚನೆ ಮೇರೆಗೆ ಗುಪ್ತವಾಗಿ ಹೂತಿಟ್ಟಿದ್ದಾಗಿ ಆರೋಪಿಸಿದ್ದಾನೆ. ಈ ಕುರಿತು ಜುಲೈ 4ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 19ರಂದು ಎಸ್ಐಟಿ ರಚನೆಯಾದ ಬಳಿಕ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು