1:52 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

20/04/2023, 19:38

ಬಂಟ್ವಾಳ(reporterkarnataka.com):
ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.ಕ್ಷೇತ್ರದಲ್ಲಿ ಮೂರು ಬಾರಿ ಪಾದಯಾತ್ರೆ ನಡೆಸಿದ್ದೇನೆ, ಆ ಸಂದರ್ಭದಲ್ಲಿ ಗ್ರಾಮದ ಸಮಸ್ಯೆ ಗಳನ್ನು ಕಂಡಿದ್ದೇನೆ. ಆ ಬಳಿಕ ಅಂತಹ ಗ್ರಾಮಗಳಿಗೆ ಪ್ರಥಮ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕಳೆದ ಅನೇಕ ವರ್ಷಗಳಲ್ಲಿ ಅಭಿವೃದ್ಧಿ ಕಾಣದೆ ಇದ್ದು, ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿರುವ ಗ್ರಾಮೀಣ ಭಾಗಗಳಲ್ಲಿ ಮೊದಲ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇದರ ಜೊತೆಯಲ್ಲಿ ಕ್ಷೇತ್ರದ ಪ್ರತಿ ಗ್ರಾಮ ಕ್ಕೂ ಸಮಾನ ರೀತಿಯಲ್ಲಿ ಅನುದಾನ ನೀಡಿ, ಅಭಿವೃದ್ಧಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಮುಂದಿನ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ರಾಜ್ಯದಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಅನಿಟ್ಟಿನಲ್ಲಿ ಬಿಜೆಪಿಯಿಂದ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿ ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾದವ ಮಾವೆ, ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯ ರಾದ ಜಯಪ್ರಸಾದ್ ,ಸಂದೀಪ್, ಜಯಂತಿ, ಮೀನಾಕ್ಷಿ , ಪ್ರಮುಖರಾದ ಸೀಮಾಮಾದವ, ದೇವಿಪ್ರಸಾದ್ ಶೆಟ್ಟಿ, ಚಿದಾನಂದ ಕಲ್ಮಲೆ, ರಮೇಶ್ ಮೈರ, ದಿನೇಶ್ ಗಣೇಶ್ ಕೋಡಿ, ವೀರಪ್ಪ ಮೂಲ್ಯ, ಗಿರಿಯಪ್ಪ ಗೌಡ, ಕೇಶವ ಶೆಟ್ಟಿ ಕೋಡಿ, ಚಂದ್ರಶೇಖರ್ ಬಾಯಿಲ, ನೋಣಯ್ಯ ಎಂ.ಆರ್, ಬೂತ್ ಸಮಿತಿ ಅಧ್ಯಕ್ಷರುಗಳಾದ ಸದಾಶಿವ ಕೇಪುಲಕೋಡಿ,ಪ್ರಕಾಶ್ ಪೂಜಾರಿ, ಧನಂಜಯ ಪಾದೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು