2:19 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

20/04/2023, 19:38

ಬಂಟ್ವಾಳ(reporterkarnataka.com):
ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.ಕ್ಷೇತ್ರದಲ್ಲಿ ಮೂರು ಬಾರಿ ಪಾದಯಾತ್ರೆ ನಡೆಸಿದ್ದೇನೆ, ಆ ಸಂದರ್ಭದಲ್ಲಿ ಗ್ರಾಮದ ಸಮಸ್ಯೆ ಗಳನ್ನು ಕಂಡಿದ್ದೇನೆ. ಆ ಬಳಿಕ ಅಂತಹ ಗ್ರಾಮಗಳಿಗೆ ಪ್ರಥಮ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕಳೆದ ಅನೇಕ ವರ್ಷಗಳಲ್ಲಿ ಅಭಿವೃದ್ಧಿ ಕಾಣದೆ ಇದ್ದು, ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿರುವ ಗ್ರಾಮೀಣ ಭಾಗಗಳಲ್ಲಿ ಮೊದಲ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇದರ ಜೊತೆಯಲ್ಲಿ ಕ್ಷೇತ್ರದ ಪ್ರತಿ ಗ್ರಾಮ ಕ್ಕೂ ಸಮಾನ ರೀತಿಯಲ್ಲಿ ಅನುದಾನ ನೀಡಿ, ಅಭಿವೃದ್ಧಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಮುಂದಿನ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ರಾಜ್ಯದಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಅನಿಟ್ಟಿನಲ್ಲಿ ಬಿಜೆಪಿಯಿಂದ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿ ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾದವ ಮಾವೆ, ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯ ರಾದ ಜಯಪ್ರಸಾದ್ ,ಸಂದೀಪ್, ಜಯಂತಿ, ಮೀನಾಕ್ಷಿ , ಪ್ರಮುಖರಾದ ಸೀಮಾಮಾದವ, ದೇವಿಪ್ರಸಾದ್ ಶೆಟ್ಟಿ, ಚಿದಾನಂದ ಕಲ್ಮಲೆ, ರಮೇಶ್ ಮೈರ, ದಿನೇಶ್ ಗಣೇಶ್ ಕೋಡಿ, ವೀರಪ್ಪ ಮೂಲ್ಯ, ಗಿರಿಯಪ್ಪ ಗೌಡ, ಕೇಶವ ಶೆಟ್ಟಿ ಕೋಡಿ, ಚಂದ್ರಶೇಖರ್ ಬಾಯಿಲ, ನೋಣಯ್ಯ ಎಂ.ಆರ್, ಬೂತ್ ಸಮಿತಿ ಅಧ್ಯಕ್ಷರುಗಳಾದ ಸದಾಶಿವ ಕೇಪುಲಕೋಡಿ,ಪ್ರಕಾಶ್ ಪೂಜಾರಿ, ಧನಂಜಯ ಪಾದೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು