3:48 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 53 ಲಕ್ಷ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

07/10/2025, 20:18

ಮಂಗಳೂರು(reporterkarnataka.com): ರಾಜ್ಯದಲ್ಲಿ 2 ಕೋಟಿ ಅಸಂಘಟಿತ ಕಾರ್ಮಿಕರುಗಳಿದ್ದು, 53 ಲಕ್ಷ ಸಂಘಟಿತ ಕಾರ್ಮಿಕರುಗಳಿದ್ದು, ಸಂಘಟಿತ ಕಾರ್ಮಿಕರಿಗೆ ಈಗಾಗಲೇ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ರಾಜ್ಯದಲ್ಲಿ ನೊಂದಾಯಿಸಿಕೊಂಡಂತಹ 18 ರಿಂದ 60 ವರ್ಷದವರಿಗೆಲ್ಲರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಇಲ್ಲಿಯ ತನಕ ಕಾರ್ಮಿಕ ವೇತನ ಬೋರ್ಡ್‌ಗೆ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ರಾಜಕೀಯ ವ್ಯಕ್ತಿಯನ್ನು ಹಾಗೂ ಸಾಮಾಜಿಕ ವಲಯದಲ್ಲಿ ತೊಡಗಿಸಿಕೊಂಡಿದ್ದು, ಅಧ್ಯಕ್ಷರು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಈಗಾಗಲೇ ಕನಿಷ್ಠ ವೇತನವನ್ನು ನಗರ-ಗ್ರಾಮೀಣ ಪ್ರದೇಶದ ಆದಾರದಲ್ಲಿ ೧೪ ರಿಂದ ೧೯ ಸಾವಿರ ರೂ. ವರೆಗೆ ಅನುಮೋದನೆಗೊಂಡಿದ್ದು, ಮುಂದಿನ ದಿನದಲ್ಲಿ ಜನರ ಜೀವನ ವೆಚ್ಚದ ಆದಾರವಾಗಿಟ್ಟುಕೊಂಡು ಕನಿಷ್ಠ ವೇತನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಕನಿಷ್ಠ ವೇತನ ಸಲಹಾ ಮಂಡಳಿಯು ರಾಜ್ಯದೆಲ್ಲೆಡೆ ಕಾರ್ಮಿಕರನ್ನು ಭೇಟಿ ಮಾಟಿ ಮಾಡಿ ಅವರಿಂದ ಬಂದ ಮನವಿ-ಸಲಹೆ ಪತ್ರಗಳನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದ ಅವರು ಕರಾವಳಿಯಲ್ಲಿ ಬೀಡಿ ಕಾರ್ಮಿಕರು ಹೆಚ್ಚಾಗಿದ್ದು, ಅವರ ಸಮಸ್ಯೆಯನ್ನು ಅದ್ಯಾಯನ ಮಾಡಿ ಪರಿಹರಿಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ವಿಶ್ವಾಸ್ ದಾಸ್, ಸದಾನಂದ ಪಾವಂಜೆ, ಮುಸ್ತಾಫ, ಶುಭೋದಯ ಆಳ್ವ, ಜಯಶೀಲ ಅಡ್ಯಾಂತಾಯ, ಲಾರೆನ್ಸ್ ಡಿಸೋಜಾ, ನಿತ್ಯಾಧರ ಶೆಟ್ಟಿ ಉಪಸ್ಥಿತರಿದ್ದರು.

*ಅ.10ಕ್ಕೆ ಕಾರ್ಮಿಕ ಸಚಿವರು ಜಿಲ್ಲೆಗೆ*

ಅ.೧೦ ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಲಿದ್ದು, ಅವರು ಜಿಲ್ಲೆಯ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು