2:42 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 53 ಲಕ್ಷ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

07/10/2025, 20:18

ಮಂಗಳೂರು(reporterkarnataka.com): ರಾಜ್ಯದಲ್ಲಿ 2 ಕೋಟಿ ಅಸಂಘಟಿತ ಕಾರ್ಮಿಕರುಗಳಿದ್ದು, 53 ಲಕ್ಷ ಸಂಘಟಿತ ಕಾರ್ಮಿಕರುಗಳಿದ್ದು, ಸಂಘಟಿತ ಕಾರ್ಮಿಕರಿಗೆ ಈಗಾಗಲೇ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ರಾಜ್ಯದಲ್ಲಿ ನೊಂದಾಯಿಸಿಕೊಂಡಂತಹ 18 ರಿಂದ 60 ವರ್ಷದವರಿಗೆಲ್ಲರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಇಲ್ಲಿಯ ತನಕ ಕಾರ್ಮಿಕ ವೇತನ ಬೋರ್ಡ್‌ಗೆ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ರಾಜಕೀಯ ವ್ಯಕ್ತಿಯನ್ನು ಹಾಗೂ ಸಾಮಾಜಿಕ ವಲಯದಲ್ಲಿ ತೊಡಗಿಸಿಕೊಂಡಿದ್ದು, ಅಧ್ಯಕ್ಷರು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಈಗಾಗಲೇ ಕನಿಷ್ಠ ವೇತನವನ್ನು ನಗರ-ಗ್ರಾಮೀಣ ಪ್ರದೇಶದ ಆದಾರದಲ್ಲಿ ೧೪ ರಿಂದ ೧೯ ಸಾವಿರ ರೂ. ವರೆಗೆ ಅನುಮೋದನೆಗೊಂಡಿದ್ದು, ಮುಂದಿನ ದಿನದಲ್ಲಿ ಜನರ ಜೀವನ ವೆಚ್ಚದ ಆದಾರವಾಗಿಟ್ಟುಕೊಂಡು ಕನಿಷ್ಠ ವೇತನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಕನಿಷ್ಠ ವೇತನ ಸಲಹಾ ಮಂಡಳಿಯು ರಾಜ್ಯದೆಲ್ಲೆಡೆ ಕಾರ್ಮಿಕರನ್ನು ಭೇಟಿ ಮಾಟಿ ಮಾಡಿ ಅವರಿಂದ ಬಂದ ಮನವಿ-ಸಲಹೆ ಪತ್ರಗಳನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದ ಅವರು ಕರಾವಳಿಯಲ್ಲಿ ಬೀಡಿ ಕಾರ್ಮಿಕರು ಹೆಚ್ಚಾಗಿದ್ದು, ಅವರ ಸಮಸ್ಯೆಯನ್ನು ಅದ್ಯಾಯನ ಮಾಡಿ ಪರಿಹರಿಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ವಿಶ್ವಾಸ್ ದಾಸ್, ಸದಾನಂದ ಪಾವಂಜೆ, ಮುಸ್ತಾಫ, ಶುಭೋದಯ ಆಳ್ವ, ಜಯಶೀಲ ಅಡ್ಯಾಂತಾಯ, ಲಾರೆನ್ಸ್ ಡಿಸೋಜಾ, ನಿತ್ಯಾಧರ ಶೆಟ್ಟಿ ಉಪಸ್ಥಿತರಿದ್ದರು.

*ಅ.10ಕ್ಕೆ ಕಾರ್ಮಿಕ ಸಚಿವರು ಜಿಲ್ಲೆಗೆ*

ಅ.೧೦ ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಲಿದ್ದು, ಅವರು ಜಿಲ್ಲೆಯ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು