11:22 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ: ಗಟ್ಟಿ ಮುಟ್ಟಾದ ರಸ್ತೆ ಅಗೆದು ಕಾಂಕ್ರೀಟ್ ಹಾಕಿದರೂ ಮೂಲ ಸಮಸ್ಯೆ ಜನಪ್ರತಿನಿಧಿಗಳಿಗೆ ಕಾಣಿಸ್ಲೇ ಇಲ್ಲ!

14/12/2023, 22:06

ಮಂಗಳೂರು(reporterkarnataka.com): ನೀವು ನೋಡುತ್ತಿರುವ ಈ ಚಿತ್ರಗಳು ನೀವು ಅಂದುಕೊಂಡಂತೆ ಸ್ಮಾರ್ಟ್ ಸಿಟಿ ಮಂಗಳೂರಿನದ್ದೇ ಆಗಿದೆ. ಅದಲ್ಲದೆ ನೀವು ತಿಳ್ಕೊಂಡಂತೆ ಹಂಪನಕಟ್ಟೆಯ ಪಿರೇರಾ ಹೊಟೇಲ್ ಸಮೀಪದ ಚಿತ್ರಣವಾಗಿದೆ.


ಸರಿ, ಹಾಗಾದರೆ ಇದರಲ್ಲೇನು ವಿಶೇಷ ಅಂದು ಕೊಳ್ಳಬಹುದು ನೀವು. ಪಿರೇರಾ ಹೊಟೇಲ್ ಬಳಿ ನಿಂತರೆ ಅಲ್ಲೇ ಸೆಂಟ್ರಲ್ ಮಾರ್ಕೆಟ್ ಕಡೆ ಹೋಗುವ ಕ್ರಾಸ್ ರೋಡ್ ಇದೆ. ಈ ರಸ್ತೆಯಲ್ಲಿ ಸಾಗಿದರೆ ರಥಬೀದಿಯತ್ತಲೂ ಹೋಗಬಹುದು, ಇಲ್ಲವೇ ಕೆ.ಎಸ್. ರಾವ್ ರಸ್ತೆಗೂ ಸೇರಬಹುದು. ಆದರೆ ಈ ಪಿರೇರಾ ಹೊಟೇಲ್ ಬಳಿಯ ಸಮಸ್ಯೆ ಏನೆಂದರೆ ಇಲ್ಲೇ ಸಿಟಿ ಬಸ್ ಸ್ಟಾಪ್ ಕಲ್ಪಿಸಲಾಗಿದೆ. ಬಸ್ ಶೆಲ್ಟರ್ ಕೂಡ ಇದೆ. ರೋಡ್ ಟರ್ನ್ ಆಗುವ ಜಾಗದಲ್ಲೇ ಪ್ರಭಾವಿಗಳಿಗೆ ತೊಂದರೆಯಾಗದಂತೆ ಅವೈಜ್ಞಾನಿಕ ಮಾದರಿಯಲ್ಲಿ ಬಸ್ ಶೆಲ್ಟರ್ ನಿರ್ಮಿಸಲಾಗಿದೆ. ಅಷ್ಟೇ ಅಲ್ಲದೆ ಇಲ್ಲಿ ರಸ್ತೆ ಬದಿಯೂ ಸರಿ ಇಲ್ಲ. ಗಟ್ಟಿಮುಟ್ಟಾದ ರಸ್ತೆಯನ್ನು ಅಗೆದು ಸ್ಮಾರ್ಟ್ ಸಿಟಿ ಹಣದಲ್ಲಿ ಕಾಂಕ್ರೀಟ್ ಹಾಕಿದವರಿಗೆ ಇದೆಲ್ಲ ಕಾಣಿಸೋಲ್ಲ. ರಸ್ತೆ ಬದಿ ತಗ್ಗು ದಿಣ್ಣೆಗಳಿಂದ ಕೂಡಿದೆ. ಪೀಕ್ ಅವರ್ ನಲ್ಲಿ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಬಸ್ ಸೇರಿದಂತೆ ವಾಹನಗಳು ರಸ್ತೆ ಬಿಟ್ಟು ಕೆಳಗಿಳಿಯುತ್ತವೆ. ತಗ್ಗು ದಿಣ್ಣೆಯಲ್ಲಿ ಸಂಚರಿಸುತ್ತವೆ. ಇಂತಹ ನೂರಾರು ಸಮಸ್ಯೆಗಳು ನಿತ್ಯ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಆದರೆ ಅಧಿಕಾರಸ್ಥರಿಗೆ ಕಾಣಿಸೋದೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು