9:59 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ: ಕದ್ರಿ ಪಾರ್ಕ್ ಫುಡ್ ಕೋರ್ಟ್ ಬಗ್ಗೆ ಚರ್ಚೆ

09/01/2024, 21:25

ಮಂಗಳೂರು(reporterkarnataka.com):ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು, ಇಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಫುಡ್ ಕೋರ್ಟ್ ಗಳಿಗೆ ಪ್ರತ್ಯೇಕ ಘಟಕ ವನ್ನು ರೂಪಿಸುವ ಬಗ್ಗೆ ಚರ್ಚೆ ನಡೆಯಿತು.
ಕದ್ರಿ ಉದ್ಯಾನವನ, ಜಿಂಕೆವನ, ಪಾರ್ಕ್ ರಸ್ತೆ ಗಳನ್ನು ಏಕೀಕೃತವಾಗಿ ನಿರ್ವಹಣೆ ಮಾಡಲು ಗುತ್ತಿಗೆ ನೀಡುವ ಬಗ್ಗೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮೀನುಗಾರಿಕಾ ಕಾಲೇಜಿನಲ್ಲಿ ನಿರ್ಮಿಸಲಾದ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಫೆಬ್ರವರಿಯಿಂದ ಆರಂಭಿಸಲು ಈಗಾಗಲೇ ವೇಳಾಪಟ್ಟಿ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಜಲಾಭಿಮುಖ ರಸ್ತೆ ನಿರ್ಮಾಣ ದಲ್ಲಿ ಜಮೀನು ಸಮಸ್ಯೆ ಗಳನ್ನು ಕಾನೂನಾತ್ಮಕವಾಗಿ ಪರಿಹರಿಸಿ ಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಬಂದರು ಇಲಾಖೆಯ ಭೂಮಿಯನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.
ಎಮ್ಮೆಕೆರೆ ಈಜುಕೊಳವನ್ನು ಈಜು ಫೆಡರೇಷನ್, ಅಕಾಡೆಮಿಗಳಿಗೆ ಕಾರ್ಯಕ್ರಮ ಗಳನ್ನು ಆಯೋಜಿಸುವ ಜವಾಬ್ದಾರಿ ನೀಡಿ ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆಯನ್ನು ನೀಡಿದರು. ಇದರಿಂದ ಈಜುಕೊಳವು ಸಮರ್ಪಕ ರೀತಿಯಲ್ಲಿ ಉಪಯೋಗವಾಗುತ್ತದೆ ಮತ್ತು ಜನ ಮನ್ನಣೆಯನ್ನು ಗಳಿಸಲು, ಸಮರ್ಪಕ ಆದಾಯವನ್ನು ಗಳಿಸಬಹುದು ಎಂದರು. ಈಜು ತರಬೇತಿ ಪಡಿಸಲು ಬೇಕಾದ ಎಲ್ಲಾ ಸೌಕರ್ಯ ಹಾಗೂ ಅಕಾಡೆಮಿ ಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ರಾಷ್ಟ್ರ ಧ್ವಜಸ್ತಂಭವನ್ನು ನಿರ್ಮಾಣ ಸಂಬಂಧ ಸೂಕ್ತ ಸ್ಥಳ ಅಂತಿಮಗೊಳಿಸಿ ಸರಿಯಾದ ಯೋಜನೆಯನ್ನು ರೂಪಿಸಿ ಮುಂದುವರೆಯುವಂತೆ ಸಲಹೆ ನೀಡಿದರು.
ಈಗಾಗಲೇ ಸ್ಮಾರ್ಟ್ ಸಿಟಿ ಕಾಮಗಾರಿಯಗಳನ್ನು ಕೈಗೊಂಡು ಐದು ವರ್ಷಗಳು ಕಳೆದಿವೆ. ಕೆಲಸಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಹಾನಗರಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿ, ಆಯುಕ್ತ ಆನಂದ್, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣ ಪ್ರಭ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು